BREAKING: ಕಾರಿನ ಮೇಲೆ ಕಾಡಾನೆ ದಾಳಿ; ಸ್ವಲ್ಪದರಲ್ಲಿ ಬಚಾವಾದ ದಂಪತಿ

ಕೊಡಗು: ಕಾಡಾನೆಯೊಂದು ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಮತ್ತಿಕಾಡಿನಲ್ಲಿ ನಡೆದಿದೆ.

ಕಾರಿನ ಮೇಲೆ ಒಂಟಿ ಸಲಗ ದಾಳಿ ನಡೆಸುತ್ತಿದ್ದಂತೆ ತಕ್ಷಣ ಕಾರಿನಿಂದ ಇಳಿದ ದಂಪತಿ ಓಡಿ ಹೋಗಿ ತಪ್ಪಿಸಿಕೊಂಡಿದ್ದಾರೆ. ಕಾರಿನಲ್ಲಿ ದಂಪತಿ ಮತ್ತಿಕಾಡು ಮನೆಗೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಬೆಂಜ್ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಕೋರನ ಟಿಪ್ಪು ಎಂಬುವವರಿಗೆ ಸೇರಿದ ಬೆಂಜ್ ಕಾರು ಇದಾಗಿದ್ದು, ಕಾಡಾನೆ ಕಾರನ್ನು ದಂತದಿಂದ ತಿವಿದು ಜಖಂಗೊಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read