ಚಿಕ್ಕಮಗಳೂರು : ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ ಎನ್ ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಮೀನಾ ನಾಗರಾಜ್ ಈ ಹಿಂದೆ ಮಾಹಿತಿ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸದ್ಯ, ಅವರನ್ನು ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
5 ‘IAS’ ಅಧಿಕಾರಿಗಳ ಸ್ಥಳ ನಿಯೋಜನೆ
ಬೆಂಗಳೂರು: ಇತ್ತೀಚೆಗೆ ವರ್ಗಾವಣೆಗೊಂಡಿದ್ದ 5 ಐಎ ಎಸ್ ಅಧಿಕಾರಿಗಳ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
1) ನವೀನ್ ರಾಜ್ ಸಿಂಗ್ – ಕಾರ್ಯದರ್ಶಿ, ವಸತಿ ಇಲಾಖೆ
2)ಸುಷ್ಮಾ ಗೋಡ್ಬೋಲೆ – ಸಿಇಒ, ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ
3)ಯಶ್ವಂತ್ ಗುರುಕರ್-ಇಡಿ, ಗವರ್ನೆನ್ಸ್ ಸೆಂಟರ್
4)ಪಿ. ಸುನೀಲ್ ಕುಮಾರ್- ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ
5) ಎಂ.ಆರ್. ರವಿಕುಮಾರ್-ಎಂಡಿ, ಮೈಸೂರು ಸಕ್ಕರೆ ಕಾರ್ಖಾನೆ ಗೆ ನೇಮಕ ಮಾಡಲಾಗಿದೆ.
ವರ್ಗಾವಣೆಗೊಂದು ಸ್ಥಳ ನಿಯೋಜನೆಗಾಗಿ ಈ ಅಧಿಕಾರಿಗಳು ಕಾಯುತ್ತಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.