BREAKING NEWS: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಮೇಲೆ ಗುಂಡಿನ ದಾಳಿ

ಲಖ್ನೋ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಬಳಿ ಆಜಾದ್ ಮೇಲೆ ಫೈರಿಂಗ್ ಮಾಡಲಾಗಿದೆ.

ಹರಿಯಾಣ ನೋಂದಣಿ ಸಂಖ್ಯೆ ಇರುವ ವಾಹನದಲ್ಲಿ ಬಂದಿದ್ದ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡಿನ ದಾಳಿಯಲ್ಲಿ ಚಂದ್ರಶೇಖರ ಆಜಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಹರಾನ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಸಂಜೆ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆಜಾದ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಂಬೇಡ್ಕರ್‌ವಾದಿ ಕಾರ್ಯಕರ್ತರ ಬೆಂಗಾವಲು ವಾಹನದ ಮೇಲೆ ಕಾರ್ ನಲ್ಲಿ ಬಂದ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ ಎಂದು ಸಹರಾನ್‌ಪುರ ಎಸ್‌ಎಸ್‌ಪಿ ಡಾ. ವಿಪಿನ್ ತಾಡಾ ತಿಳಿಸಿದ್ದಾರೆ.

 

ಒಂದು ಗುಂಡು ಚಂದ್ರಶೇಖರ್ ಆಜಾದ್ ಅವರನ್ನು ದಾಟಿದೆ. ಅವರು ಆರೋಗ್ಯವಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಸಿಹೆಚ್‌ಸಿಗೆ ಕರೆದೊಯ್ಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಗಾಯಗೊಂಡಿರುವ ಆಜಾದ್ ಅವರ ಛಾಯಾಚಿತ್ರಗಳನ್ನು ಹಂಚಿಕೊಳ್ಳಲಾಗಿದ್ದು, ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read