ದಂಗಾಗುವಂತಿದೆ ತಹಶೀಲ್ದಾರ್ ಆಸ್ತಿ: ರಾತ್ರಿಯಿಡಿ ಮುಂದುವರೆದ ಪರಿಶೀಲನೆ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಕೆಆರ್ ಪುರ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಮನೆ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನ ಬೆಳಗ್ಗೆ ದಾಳಿ ನಡೆಸಿದ್ದು, ದಾಳಿಯ ಸಂದರ್ಭದಲ್ಲಿ 40 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

1.9 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಪತ್ತೆ ಹಚ್ಚಲಾಗಿದ್ದು, ಬೇನಾಮಿ ಹೆಸರಲ್ಲಿ ದೊಡ್ಡಬಳ್ಳಾಪುರದಲ್ಲಿ ನೂರಾರು ಎಕರೆ ಜಾಗ ಖರೀದಿಸಿರುವುದು ಗೊತ್ತಾಗಿದೆ. ಎಲ್ಲಾ ಆಸ್ತಿಗಳನ್ನು ಸಹೋದರ ಮತ್ತು ಸಂಬಂಧಿ ಹೆಸರಲ್ಲಿ ಖರೀದಿಸಿದ್ದಾರೆ. ಅವರ ಬಳಿ ಐಷಾರಾಮಿ ಕಾರ್ ಗಳು ಇವೆ. ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಲ್ಯಾಂಡ್ ಕ್ರೂಸರ್, 4 ಫಾರ್ಚುನರ್ ಮತ್ತು ನಾಲ್ಕು ಥಾರ್ ವಾಹನಗಳು ಇವೆ. ಪರಿಶೀಲನೆ ಕಾರ್ಯ ಮುಂದುವರಿದಿದೆ.

ನಿನ್ನೆ ಬೆಳಗ್ಗೆಯಿಂದಲೂ ದಾಖಲೆಗಳ ಪರಿಶೀಲನಾ ಕಾರ್ಯ ಮುಂದುವರೆದಿದೆ. ಅಜಿತ್ ಅವರಿಗೆ ಸಂಬಂಧಿಸಿದ 10 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಜಿತ್ ರೈಗೆ ಸೇರಿದ ನೂರು ಎಕರೆಗೂ ಅಧಿಕ ವಿವಿಧ ಆಸ್ತಿಗಳು ಪತ್ರಗಳು ಪತ್ತೆಯಾಗಿದೆ. ಬೆಂಗಳೂರಿನ ಸಹಕಾರ ನಗರದ ಮನೆಯಲ್ಲಿ ರಾತ್ರಿಯಿಡಿ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read