ಹಲ್ಲಿಯನ್ನೇ ನುಂಗಿದ ಯುವತಿ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ: ಕಾರಣ ಗೊತ್ತಾ…?

ಕಾನ್ಪುರ: ಕಾನ್ಪುರದಲ್ಲಿ ಅತ್ಯಾಚಾರ ಆರೋಪಿ ಜೈಲಿಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಹಲ್ಲಿಯನ್ನು ನುಂಗಿದ್ದಾನೆ. ಹದಿಹರೆಯದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿ ಜೈಲಿಗೆ ಹೋಗಲು ಇಷ್ಟವಿಲ್ಲದ ಕಾರಣ ಪೊಲೀಸ್ ಕಸ್ಟಡಿಯಲ್ಲಿ ಹಲ್ಲಿಯನ್ನು ನುಂಗಿದ್ದಾನೆ.

ಆತನ ಆರೋಗ್ಯ ಸ್ಥಿತಿ ಹದಗೆಟ್ಟ ನಂತರ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಅವನನ್ನು ಭಿತರ್‌ ಗಾಂವ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು, ಅಲ್ಲಿಂದ ವೈದ್ಯರು ಅವನನ್ನು ಲಾಲಾ ಲಜಪತ್ ರಾಯ್ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಜೂನ್ 14 ರಂದು, ಸಾಧ್ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯ ನಿವಾಸಿಯಾದ ಹುಡುಗಿಯ ತಂದೆ, ತಮ್ಮ 18 ವರ್ಷದ ಮಗಳನ್ನು ತಮ್ಮ ಸಂಬಂಧಿಕರ ಮಹಿಳೆಯೊಬ್ಬರು ಕರೆದೊಯ್ದಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ನಂತರ ಪೊಲೀಸರು ಬಾಲಕಿಯ ಸ್ಥಳವನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿದರು. ಪೊಲೀಸ್ ತಂಡ ವ್ಯಕ್ತಿಯನ್ನು ಹಿಡಿದು ಭಾನುವಾರ ಹುಡುಗಿಯನ್ನು ರಕ್ಷಿಸಿದೆ. ವಿಚಾರಣೆ ವೇಳೆ ವ್ಯಕ್ತಿ ತನ್ನನ್ನು ಫತೇಪುರ್ ಜಿಲ್ಲೆಯ ಕಿಶನ್‌ಪುರ ಗ್ರಾಮದ ನಿವಾಸಿ ಮಹೇಶ್ ಕುಮಾರ್(24) ಎಂದು ಗುರುತಿಸಲಾಗಿದೆ.

ತನ್ನನ್ನು ಅಪಹರಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾಳೆ. ಇದಾದ ನಂತರ ಆರೋಪಿ ಮಹೇಶ್ ಲಾಕಪ್ ನಲ್ಲಿದ್ದ ಹಲ್ಲಿಯನ್ನು ಹಿಡಿದು ತಿಂದಿದ್ದಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read