alex Certify BIG NEWS : ನಿರ್ಮಾಪಕರ ವಿರುದ್ಧ ರೊಚ್ಚಿಗೆದ್ದ ‘ಕಿಚ್ಚ ಸುದೀಪ್’ ಅಭಿಮಾನಿಗಳು : ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಿರ್ಮಾಪಕರ ವಿರುದ್ಧ ರೊಚ್ಚಿಗೆದ್ದ ‘ಕಿಚ್ಚ ಸುದೀಪ್’ ಅಭಿಮಾನಿಗಳು : ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ

ಚಾಮರಾಜನಗರ : ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಕುಮಾರ್,ರೆಹಮಾನ್ ವಿರುದ್ಧ ಸುದೀಪ್ ಅಭಿಮಾನಿಗಳು ರೊಚ್ಚಿಗೆದ್ದಿದ್ದು, ಕುಮಾರ್ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಪ್ರತಿಭಟನೆ ನಡೆಸಿದ್ದಾರೆ.

ವಂಚನೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಹಾಗೂ ಕುಮಾರ್ ನಡುವೆ ಜಟಾಪಟಿ ನಡೆಯುತ್ತಿದೆ. ಚಿತ್ರಕ್ಕಾಗಿ ಮುಂಗಡವಾಗಿ ಹಣ ಪಡೆದು ಸಿನಿಮಾ ಮಾಡಿಲ್ಲ ಎಂದು ಎಂ ಎನ್ ಕುಮಾರ್ ಮತ್ತು ರೆಹಮಾನ್ ಆರೋಪ ಮಾಡಿದ್ದಾರೆ. ನಿರ್ಮಾಪಕರು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ನಾವು ಇದನ್ನ ಖಂಡಿಸುತ್ತೇವೆ. ಈ ಕೂಡಲೇ ಸುದೀಪ್ ಅವರಿಗೆ ಕ್ಷಮೆ ಕೇಳಬೇಕು. ಇಲ್ಲವಾದಲ್ಲಿ ನಿರ್ಮಾಪಕರ ಮನೆ ಮುಂದೆ ಕೂತು ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಇದರ ಹಿಂದೆ ದೊಡ್ಡ ಪಿತೂರಿ ನಡೆಯುತ್ತಿದೆ. ಮೂರು ದಿನಗಳಲ್ಲಿ ಕ್ಷಮೆ ಕೇಳದಿದ್ದರೆ ನಾವು ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್ ವುಡ್ ನಿರ್ಮಾಪಕ ಎಂ ಎನ್ ಕುಮಾರ್ ಮಾಡಿದ ಆರೋಪಗಳಿಗೆ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಉತ್ತರ ನೀಡಿದ್ದರು.ಕುಮಾರ್ ಮಾಡಿದ ಆರೋಪಕ್ಕೆ ಉತ್ತರ ನೀಡಿದ ಸುದೀಪ್ 10 ಕೋಟಿ ರೂs ಪರಿಹಾರ ನೀಡುವಂತೆ ನೋಟಿಸ್ ಕಳುಹಿಸಿದ್ದರು. ಹಾಗೆಯೇ ಕ್ರಿಮಿನಲ್ ಕೇಸ್ ಕೂಡ ದಾಖಲಿಸಿದ್ದಾರೆ. ಸುದೀಪ್ ಕನ್ನಡ ಚಿತ್ರರಂಗದಲ್ಲಿ 20 ವರ್ಷದಿಂದ ನಟಿಸುತ್ತಿದ್ದಾರೆ, ಸಮಾಜ ಸೇವೆಯ ಮೂಲಕ ಹಲವರಿಗೂ ಮಾದರಿಯಾಗಿದ್ದಾರೆ, ನೀವು ಮಾಡಿರುವ ಆರೋಪ ಸುಳ್ಳಾಗಿದ್ದು, ಮಾನಹಾನಿ ಉಂಟು ಮಾಡಿದ್ದೀರಾ..? ನೀವು ಕ್ಷಮೆಯಾಚಿಸಬೇಕು ಹಾಗೂ ಪರಿಹಾರ ನೀಡಬೇಕು ಎಂದು ಸುದೀಪ್ ಪರ ವಕೀಲರು ಲೀಗಲ್ ನೋಟಿಸ್ ನೀಡಿದ್ದರು. ಸುದ್ದಿಗೋಷ್ಟಿಯಲ್ಲಿ ಅಧಾರ ರಹಿತ ಆರೋಪ ಮಾಡಿದ್ದಾರೆ. ಆದ್ದರಿಂದ ಮಾಧ್ಯಮಗಳ ಮೂಲಕ ಕ್ಷಮೆಯಾಚಿಸಬೇಕೆಂದು ನೋಟಿಸ್ ನಲ್ಲಿ ತಾಕೀತು ಮಾಡಿದ್ದರು. ಕೆಲವು ದಿನಗಳ ಹಿಂದೆ ಸುದ್ದಿಗೋಷ್ಟಿ ನಡೆಸಿದ ಕುಮಾರ್ ಕಿಚ್ಚ ಸುದೀಪ್ ಗೆ ಒಂದು ಸಿನಿಮಾದ ಅಡ್ವಾನ್ಸ್ ಕೊಟ್ಟಿದ್ದೇನೆ, ಆದರೆ ಅವರು ಕೈಗೆ ಸಿಗುತ್ತಿಲ್ಲ. ಹಣಕೊಟ್ಟು ಬೇಡುವ ಸ್ಥಿತಿಬಂದಿದೆ ಎಂದು ಕುಮಾರ್ ವಾಣಿಜ್ಯ ಮಂಡಳಿಗೆ ಮನವಿ ಪತ್ರ ಸಲ್ಲಿಸಿದ್ದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...