ಕೊನೆ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶ ನೀಡಿದ ಕಾಲೇಜಿಗೆ 5 ಲಕ್ಷ ರೂ. ದಂಡ

ಬೆಂಗಳೂರು: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿಗದಿಪಡಿಸಿದ್ದ ಕೊನೆಯ ದಿನಾಂಕ ಮುಗಿದ ನಂತರ ವಿದ್ಯಾರ್ಥಿಗೆ ಪ್ರವೇಶಾತಿ ಮಾಡಿಕೊಂಡ ಕಾಲೇಜಿಗೆ ಹೈಕೋರ್ಟ್ ದಂಡ ವಿಧಿಸಿದೆ.

ಮಂಗಳೂರು ಮೂಲದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ವಿವಿ ನಿಗದಿಪಡಿಸಿದ್ದ ದಿನಾಂಕ ಮುಗಿದ ನಂತರವೂ ವಿದ್ಯಾರ್ಥಿಗೆ ಪ್ರವೇಶಾತಿ ನೀಡಿದ ಹಿನ್ನೆಲೆಯಲ್ಲಿ ಮುಂದಿನ ವರ್ಷ ಒಂದು ಮ್ಯಾನೇಜ್ಮೆಂಟ್ ಕೋಟಾದ ಸೀಟನ್ನು ಸರ್ಕಾರಕ್ಕೆ ಬಿಟ್ಟು ಕೊಡಬೇಕೆಂದು ಹೈಕೋರ್ಟ್ ನಿರ್ದೇಶನ ನೀಡಿದೆ.

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ತನ್ನ ಪ್ರವೇಶವನ್ನು ಅನುಮೋದಿಸದ ಕ್ರಮ ಪ್ರಶ್ನಿಸಿ ಕಾಲೇಜಿನ ವಿದ್ಯಾರ್ಥಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಏಕ ಸದಸ್ಯ ಪೀಠದಿಂದ ಈ ಆದೇಶ ನೀಡಲಾಗಿದೆ.

ವಿವಿಗೆ ಕಾಲೇಜು 5 ಲಕ್ಷ ರೂ. ದಂಡಪಾವತಿಸಬೇಕು. ಇನ್ನು ಮುಂದೆ ದಿನಾಂಕ ಮುಗಿದ ನಂತರ ಯಾವುದೇ ವಿದ್ಯಾರ್ಥಿಯನ್ನು ಅಡ್ಮಿಷನ್ ಮಾಡಿಕೊಳ್ಳುವುದಿಲ್ಲ ಎಂದು ಮುಚ್ಚಳಿಕೆ ಬರೆದು ಕೊಡಬೇಕು. ಅವಧಿ ಮುಗಿದ ನಂತರವೂ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಂಡರೆ ತನಿಖೆ ನಡೆಸಲು ವಿಶ್ವವಿದ್ಯಾಲಯ ಸ್ವತಂತ್ರವಾಗಿದೆ. ಅಗತ್ಯವಾದರೆ ಕಾಲೇಜಿನ ಮಾನ್ಯತೆಯನ್ನು ಸಹ ಹಿಂಪಡೆಯಬಹುದು ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read