ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ, ಬಹಳ ದಿನ ನಡೆಯಲ್ಲ; ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ

ಹಾವೇರಿ: ಕಾಂಗ್ರೆಸ್ ನಾಯಕರು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಹಾವೇರಿಯ ಶಿಗ್ಗಾಂವಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಆರ್.ಆಸ್.ಎಸ್ ಗೆ ಮಂಜೂರಾಗಿದ್ದ ಭೂಮಿಯನ್ನು ಸರ್ಕಾರ ತಡೆ ಹಿಡಿದ ವಿಚಾರವಾಗಿ, ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ಆರ್.ಎಸ್.ಎಸ್.ಸಂಘಟನೆ ಶಿಕ್ಷಣ ಕ್ಷೇತ್ರದಲ್ಲಿ ದೊಡ್ದ ಕೆಲಸ ಮಾಡುತ್ತಿದೆ. ಬಡವರ ಮಕ್ಕಳು, ಅನಾಥರಿಗೆ ಸಹಾಯ ಮಡುತ್ತಿದೆ. ಆದರೆ ಶಿಕ್ಷಣ ಸಂಸ್ಥೆಗೆ ನೀಡಲಾಗಿದ್ದ ಭೂಮಿಗೆ ಈಗ ಕಾಂಗ್ರೆಸ್ ಸರ್ಕಾರ ತಡೆ ನೀಡಿರುವುದು ಸರಿಯಲ್ಲ ಎಂದರು.

ಸಂಪುಟಕ್ಕೆ ಅಧಿಕಾರ ಇದೆ. ಹಾಗಾಗಿ ನಮ್ಮ ಅವಧಿಯಲ್ಲಿ ಭೂಮಿ ಮಂಜೂರು ಮಾಡಿದ್ದೆವು. ಆದರೆ ಈಗ ಮಂಜುರಾಗಿದ್ದ ಭೂಮಿಗೆ ತಡೆ ನೀಡುವ ಮೂಲಕ ರಾಜ್ಯ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ಇದು ಬಹಳ ದಿನ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read