BIG NEWS : ಖಾಸಗಿ ಬಸ್ ಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ ? : ಮಹತ್ವದ ಮಾಹಿತಿ ನೀಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣದ ಸೇವೆ ನೀಡಿದ ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ವಿರುದ್ಧ ಕರ್ನಾಟಕ ಖಾಸಗಿ ಸಾರಿಗೆ ಸಂಘಟನೆಗಳು ಸಿಡಿದೆದ್ದಿದ್ದು, ಜುಲೈ 27 ರಂದು ಮುಷ್ಕರಕ್ಕೆ ಕರೆ ನೀಡಿದೆ.

ಖಾಸಗಿ ಬಸ್ಸುಗಳಿಗೂ ‘ಶಕ್ತಿ ಯೋಜನೆ’ ವಿಸ್ತರಣೆ ಮಾಡುವಂತೆ ಖಾಸಗಿ ಬಸ್ ಸಂಘಟನೆಗಳು ಒತ್ತಾಯಿಸಿದ್ದು, ಈ ಕುರಿತು ಸಾರಿಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.

ಖಾಸಗಿ ಬಸ್ಸುಗಳಿಗೂ ಶಕ್ತಿ ಯೋಜನೆ ವಿಸ್ತರಣೆ ಬಗ್ಗೆ ಸಿಎಂ ಜೊತೆ ಸದ್ಯದಲ್ಲೇ ಚರ್ಚೆ ಮಾಡಲಾಗುತ್ತದೆ ಎಂದ ಸಚಿವ ರಾಮಲಿಂಗಾ ರೆಡ್ಡಿ , ಇಂದು ಮಧ್ಯಾಹ್ನ 3 ಗಂಟೆಗೆ ಖಾಸಗಿ ಸಾರಿಗೆ ಸಂಸ್ಥೆಗಳ ಪದಾಧಿಕಾರಿಗಳ ಜೊತೆಗೆ ಮಾತುಕತೆ ನಿಗದಿಯಾಗಿದೆ ಎಂದು ಹೇಳಿದ್ದಾರೆ.

ಶಕ್ತಿ’ ಯೋಜನೆಯಿಂದ ಆಗಿರುವ ತೊಂದರೆ ಪರಿಹರಿಸುವಂತೆ ಒತ್ತಾಯಿಸಿ ಜು.27 ರಂದು ನಗರದಲ್ಲಿ ಆಟೋರಿಕ್ಷಾ, ಖಾಸಗಿ ಬಸ್, ಓಲಾ- ಊಬರ್, ಮ್ಯಾಕ್ಸಿಕ್ಯಾಬ್ಗಳ ಮಾಲೀಕ, ಚಾಲಕರು ಸಂಚಾರ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. ಈ ಹಿನ್ನೆಲೆ ಪ್ರಯಾಣಿಕರಿಗೆ ತೊಂದರೆ ಆಗಲಿದೆ.ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಆಟೋರಿಕ್ಷಾ ಸೇರಿ ಸಾರ್ವ ಜನಿಕ ಸೇವೆಯ ಖಾಸಗಿ ವಾಹನ ಚಾಲಕರಿಗೆ ಮಾಸಿಕ 10 ಸಾವಿರ ಪರಿಹಾರಕ್ಕೆ ಒತ್ತಾಯಿಸಿ ರಾಯಣ್ಣ ವೃತ್ತದಿಂದ ನಗರದಲ್ಲಿ ಸಾವಿರಾರು ಚಾಲಕರು ಸೇರಿ ರ್ಯಾಲಿ ನಡೆಸಿ, ಸ್ವಾತಂತ್ರ್ಯ ಉದ್ಯಾನದಲ್ಲಿ ಸಂಜೆ 7 ಗಂಟೆವರೆಗೆ ಧರಣಿ ನಡೆಸಲು ನಿರ್ಧಾರ ಮಾಡಿರುವುದಾಗಿ ಖಾಸಗಿ ಸಾರಿಗೆ ಸಂಘಟನೆಗಳು ಘೋಷಿಸಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲು ಜುಲೈ 27 ರಂದು ಬಂದ್ ಗೆ ಕರೆ ನೀಡಿದೆ. ಸಾರಿಗೆ ಸಂಘಟನೆ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕೂಡ ಬೆಂಬಲ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read