BIG NEWS: ತಡವಾಗಿ ಮಳೆ ಆರಂಭ ಹಿನ್ನೆಲೆ; ಕೃಷಿ ಇಲಾಖೆಯಿಂದ ಅಲ್ಪಾವಧಿ ಬೆಳೆ ಬಿತ್ತನೆ ಬೀಜ ಪೂರೈಕೆ

ರಾಜ್ಯಕ್ಕೆ ಈ ಬಾರಿ ಮುಂಗಾರು ವಿಳಂಬವಾಗಿ ಕಾಲಿಟ್ಟಿದ್ದು, ಅಲ್ಲದೆ ಆರಂಭದಲ್ಲಿ ಮಳೆ ಸಹ ಕುಂಠಿತಗೊಂಡಿತ್ತು. ಇದೀಗ ತಡವಾಗಿಯಾದರೂ ಮಳೆ ಅಬ್ಬರಿಸುತ್ತಿದ್ದು, ಆದರೆ ಕೆಲವು ಭಾಗಗಳಲ್ಲಿ ದ್ವಿದಳ ಧಾನ್ಯದ ಬಿತ್ತನೆ ಸಮಯ ಮೀರಿದೆ. ಹೀಗಾಗಿ ಕೃಷಿ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಅಲ್ಪಾವಧಿಯಲ್ಲಿ ಬೆಳೆಯುವ ರಾಗಿ, ಹುರುಳಿ, ಜೋಳ ಸೇರಿದಂತೆ ಅಗತ್ಯ ಬಿತ್ತನೆ ಬೀಜ ಪೂರೈಸಲು ತೀರ್ಮಾನಿಸಲಾಗಿದ್ದು, ಶುಕ್ರವಾರದಂದು ಹಿರಿಯ ಅಧಿಕಾರಿಗಳ ಜೊತೆ ಬೆಂಗಳೂರಿನಲ್ಲಿ ಸಭೆ ನಡೆಸಿದ ಬಳಿಕ ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಈ ವಿಷಯ ತಿಳಿಸಿದ್ದಾರೆ.

ಮಳೆ ಕೊರತೆ ಕಾರಣಕ್ಕೆ ರಾಜ್ಯದಲ್ಲಿ ಈವರೆಗೆ ಶೇ.53ರಷ್ಟು ಬಿತ್ತನೆಯಾಗಿದ್ದು, ಮುಂದಿನ 15 ದಿನಗಳಲ್ಲಿ ಶೇ.100 ರಷ್ಟು ಬಿತ್ತನೆ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವರು, ರೈತರು ಬಿತ್ತನೆ ಬೀಜವನ್ನು ರೈತ ಕೇಂದ್ರ ಅಥವಾ ಇಲಾಖೆಯಿಂದ ಪಡೆಯಬಹುದಾಗಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read