BIGG NEWS : ಸಿಎಂ ಸಿದ್ದರಾಮಯ್ಯ `ಕೇರಳ ಫೈಲ್ಸ್’ ಸಿನಿಮಾ ನೋಡಬೇಕು : ನಳಿನ್ ಕುಮಾರ್ ಕಟೀಲ್

ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಹಿಂದೂ ವಿರೋಧಿ ನೀತಿ ಹೆಚ್ಚಾಗುತ್ತಿದೆ. ಭಯೋತ್ಪಾದಕರ ಪರ, ಹಿಂದೂ ವಿರೋಧಿ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿಎಂ, ಗೃಹ ಸಚಿವರು ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಕೇರಳ ಫೈಲ್ಸ್ ಸಿನಿಮಾ ನೋಡಲಿ, ಉಡುಪಿಯಲ್ಲಿ ನಡೆದ ಘಟನೆ ಕೇರಳ ಫೈಲ್ಸ್ ಸಿನಿಮಾ ರೀತಿ ಇದೆ. ಕಾಂಗ್ರೆಸ್ ಗೆದ್ದಾಗಲೇ ಪಾಕಿಸ್ತಾನ ಪರ ಜಯಘೋಷ ಕೂಗಿದ್ದರು. ಆದರೆ ಈವರೆಗೆ ಅವರನ್ನು ಸಿದ್ದರಾಮಯ್ಯ ಜೈಲಿಗೆ ಹಾಕಲಿಲ್ಲ ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read