ರಸ್ತೆ ಮಧ್ಯೆಯೇ ಹೊತ್ತಿ ಉರಿದ ಟ್ರಕ್; ಕ್ಷಣಾರ್ಧದಲ್ಲಿ ಪಾರಾದ ಚಾಲಕ

ವಿಜಯನಗರ: ಚಲಿಸುತ್ತಿದ್ದ ಟ್ರಕ್ ಇದ್ದಕ್ಕಿದ್ದಂತೆಯೇ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಗಿ ಬಳಿಯ ಎಂ.ಬಿ.ಅಯ್ಯನಹಳ್ಳಿ ಬಳಿ ನಡೆದಿದೆ.

ಹೊಸಪೇಟೆಯಿಂದ ಬೆಂಗಳೂರು ಮಾರ್ಗವಾಗಿ ಸಾಗುತ್ತಿದ್ದ ಪಾರ್ಸಲ್ ಬಾಕ್ಸ್ ತುಂಬಿದ್ದ ಟ್ರಕ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಏಕಾಏಕಿ ಟ್ರಕ್ ಉರಿಯಲಾರಂಭಿಸಿದೆ. ತಕ್ಷಣ ಟ್ರಕ್ ಚಾಲಕ ಟ್ರಕ್ ನಿಲ್ಲಿಸಿ ಬಚಾವ್ ಆಗಿದ್ದಾನೆ. ಟ್ರಕ್ ನಲ್ಲಿದ್ದ ಪಾರ್ಸಲ್ ಬಾಕ್ಸ್ ಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಖಾಸಗಿ ಕಂಪನಿಗೆ ಸೇರಿದ ಟ್ರಕ್ ಇದಾಗಿದ್ದು, ವಿವಿಧ ವಸ್ತುಗಳನ್ನು ಹೊತ್ತು ಬೆಂಗಳೂರಿನತ್ತ ಬರುತ್ತಿತ್ತು. ಈ ವೇಳೆ ಎಂ.ಬಿ.ಅಯ್ಯನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೈಯರ್ ಗಳ ಘರ್ಷಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಇಡೀ ವಾಹನಕ್ಕೆ ಆವರಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read