BIG NEWS : ಸಿ.ಟಿ ರವಿಗೆ ಒಲಿಯುತ್ತಾ ‘ಬಿಜೆಪಿ ರಾಜ್ಯಾಧ್ಯಕ್ಷ’ ಪಟ್ಟ : ವರಿಷ್ಟರಿಂದ ದೆಹಲಿಗೆ ಬುಲಾವ್

ಬೆಂಗಳೂರು : ಮಾಜಿ ಶಾಸಕ ಸಿಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಗಲಿದೆ ಎಂಬ ಗುಸು ಗುಸು ಕೇಳಿ ಬರುತ್ತಿದ್ದು, ಇದರ ನಡುವೆ  ಬಿಜೆಪಿ ವರಿಷ್ಟರಿಂದ ಸಿಟಿ ರವಿಗೆ ದೆಹಲಿಗೆ ಬುಲಾವ್ ಬಂದಿದೆ.

ಹೌದು. ಮಾಜಿ ಶಾಸಕ ಸಿ.ಟಿ.ರವಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು, ಬಿಜೆಪಿ ನಾಯಕ ಸಿ.ಟಿ.ರವಿ ಇಂದು ನವದೆಹಲಿಗೆ ತೆರಳಲಿದ್ದಾರೆ ಮಧ್ಯಾಹ್ನ 3 ಗಂಟೆಗೆ . ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ನಂತರ ಕೆಂಪೇಗೌಡ ಏರ್ಪೋರ್ಟ್ನಿಂದ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ದೆಹಲಿಯಲ್ಲಿ ಜೆಪಿ ನಡ್ಡಾ  ಭೇಟಿಯಾಗಲಿರುವ ಅಮಿತ್ ಶಾ ಬಿಜೆಪಿ ವರಿಷ್ಟರ ಜೊತೆ ಮಾತುಕತೆ ನಡೆಸಲಿದ್ದಾರೆ  ಎಂದು ತಿಳಿದು ಬಂದಿದೆ.

ರಾಜ್ಯ ಬಿಜೆಪಿಯ ನೂತನ ಸಾರಥಿ ಆಯ್ಕೆಗೆ ಬಿಜೆಪಿ ಕಸರತ್ತು ನಡೆಸುತ್ತಿದ್ದು, ಮುಂದಿನ ಬಿಜೆಪಿ ಸಾರಥಿಯಾಗಿ ಸಿಟಿ ರವಿ ಹೆಸರು ಮಂಚೂಣಿಯಲ್ಲಿದ್ದು, ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಖಚಿತ ಎಂದು ಹೇಳಲಾಗುತ್ತಿದೆ. ಯಾವುದಕ್ಕೂ ಕಾದು ನೋಡಬೇಕಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read