ಸಾರಿಗೆ ಇಲಾಖೆಯಲ್ಲಿ 13000 ನೇಮಕಾತಿ, ಅನುಕಂಪದ ಹುದ್ದೆಗಳೂ ಭರ್ತಿ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲಿ ಖಾಲಿ ಇರುವ ಅನುಕಂಪ ಆಧಾರಿತ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಎಸ್ಆರ್ಟಿಸಿ 62ನೇ ಸಂಸ್ಥಾಪಕರ ದಿನದ ಅಂಗವಾಗಿ ಶಾಂತಿನಗರ ಕೇಂದ್ರೀಯ ವಿಭಾಗದ ಘಟಕ ಎರಡರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾರಿಗೆ ನಿಗಮಗಳ ಅನುಕಂಪದ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಕ್ರಮವಹಿಸುವಂತೆ ತಿಳಿಸಿದ್ದಾರೆ. ಖಾಲಿ ಇರುವ 13000 ಹುದ್ದೆಗಳ ನೇಮಕಾತಿಗೆ ಕ್ರಮಕೈಗೊಳ್ಳಲಿದ್ದು, ಪ್ರಮುಖವಾಗಿ ಅನುಕಂಪದ ಆಧಾರದಲ್ಲಿ ನೇಮಕ ಮಾಡಿಕೊಳ್ಳಬೇಕಾದ ಹುದ್ದೆಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ಆರಂಭಿಸುವಂತೆ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read