alex Certify BIG NEWS : ಟ್ರ್ಯಾಕ್ ನಲ್ಲೇ ಅಪಘಾತ : ಬೆಂಗಳೂರಿನ ಕಿರಿಯ ರೈಡರ್ ‘ಶ್ರೇಯಸ್ ಹರೀಶ್’ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಟ್ರ್ಯಾಕ್ ನಲ್ಲೇ ಅಪಘಾತ : ಬೆಂಗಳೂರಿನ ಕಿರಿಯ ರೈಡರ್ ‘ಶ್ರೇಯಸ್ ಹರೀಶ್’ ದುರ್ಮರಣ

ಬೆಂಗಳೂರು : ಚೆನ್ನೈನ ಮದ್ರಾಸ್ ಇಂಟರ್ನ್ಯಾಶನಲ್ ಸರ್ಕ್ಯೂಟ್ನಲ್ಲಿ ಆಯೋಜಿಸಿದ್ದ ಇಂಡಿಯನ್ ನ್ಯಾಷನಲ್ ಮೋಟಾರ್ಸೈಕಲ್ ರೇಸಿಂಗ್  ಚಾಂಪಿಯನ್ ಶಿಪ್ ನಲ್ಲಿ ಕಿರಿಯ ರೈಡರ್ ಶ್ರೇಯಸ್ ಹರೀಶ್ ದುರ್ಮರಣಕ್ಕೀಡಾಗಿದ್ದಾರೆ.

ಶ್ರೇಯಸ್ ಹರೀಶ್ ಎಂಬ ಬೆಂಗಳೂರಿನ 13 ವರ್ಷದ ಬಾಲಕ ಸ್ಪರ್ದೆಯಲ್ಲಿ ಮೂರನೇ ಸುತ್ತಿನ ರೈಡಿಂಗ್ ವೇಳೆ ಅಪಘಾತಕ್ಕೆ ಈಡಾಗಿದ್ದು, ತಲೆಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ.ಈ ಹಿನ್ನೆಲೆ ಶನಿವಾರ ಮತ್ತು ಭಾನುವಾರದಂದು ನಿಗದಿಯಾಗಿದ್ದ ಉಳಿದ ರೇಸ್   ಗಳನ್ನು  ರದ್ದುಗೊಳಿಸಿದೆ.

ರಾಷ್ಟ್ರಮಟ್ಟದಲ್ಲಿ ಹಲವಾರು ರೇಸ್​ಗಳಲ್ಲಿ ಭಾಗಿಯಾಗಿ ಅನೇಕ ಪ್ರಶಸ್ತಿಗೆ ಶ್ರೇಯಸ್ ಭಾಜನರಾಗಿದ್ದರು. ಶ್ರೇಯಸ್ ಸಾವಿಗೆ ಪೋಷಕರು ಮಮ್ಮುಲ ಮರುಗಿದ್ದಾರೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...