BIG NEWS: ಹೃದಯಾಘಾತಕ್ಕೆ ಮತ್ತೊಂದು ಬಲಿ; ಪೊಲೀಸ್ ಕಾನ್ಸ್ ಟೇಬಲ್ ಸಾವು

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಹೃದಯ ಸ್ತಂಭನಕ್ಕೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ.

ಗೋಗಿ ಠಾಣೆಯ ದೇವೀಂದ್ರಪ್ಪ (40) ಮೃತ ಕಾನ್ಸ್ ಟೇಬಲ್. ದೇವೀಂದ್ರಪ್ಪ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ಮೂರು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ದೇವೀಂದ್ರ ಜೂನ್ ನಿಂದ ಅನಾರೋಗ್ಯ ಕಾರಣಕ್ಕೆ ರಜೆಯಲ್ಲಿದ್ದರು. ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ವೇಳೆಯೇ ಹೃದಯಾಘಾತದಿಂದ ದೇವೀಂದ್ರಪ್ಪ ಸಾವನ್ನಪಿದ್ದರೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read