ರೈತಾಪಿ ವರ್ಗಕ್ಕೆ ಗುಡ್ ನ್ಯೂಸ್: ನಾಳೆಯಿಂದ ಮತ್ತೆ ಮಳೆ ಚುರುಕು

ಬೆಂಗಳೂರು: ವಾರಾಂತ್ಯದಿಂದ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ದುರ್ಬಲಗೊಂಡಿರುವ ನೈರುತ್ಯ ಮುಂಗಾರು, ರೈತರಿಗೆ ಸಂಕಷ್ಟ ತಂದಿದೆ. ಕರಾವಳಿಯ ಕೆಲವು ಕಡೆ ಸಾಧಾರಣ ಮಳೆಯಾಗುತ್ತಿದೆ. ಈ ವಾರಾಂತ್ಯದ ಬೆಳಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಕಳೆದ ಎರಡು ವಾರಗಳಿಂದ ಬಹುತೇಕ ಭಾಗದಲ್ಲಿ ಮಳೆಯಾಗಿಲ್ಲ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆದಿದೆ. ಕೃಷಿ ಚಟುವಟಿಕೆ ಮೇಲೆ ಪರಿಣಾಮ ಬೀರಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬಹುತೇಕ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆಯಾಗಿದ್ದು, ಮಳೆ ಆಶ್ರಿತ, ನೀರಾವರಿ ಬೆಳೆಗಳಿಗೆ ಸಮಸ್ಯೆಯಾಗಿದೆ. ಶನಿವಾರ ಭಾನುವಾರದಿಂದ ಕೆಲವು ದಿನಗಳ ಕಾಲ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read