BIG NEWS : ‘100 ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ’ : ಕೃಷಿ ಸಚಿವ ಚೆಲುವಯರಾಯಸ್ವಾಮಿ

ಬೆಂಗಳೂರು : 100ಕ್ಕೂ ಹೆಚ್ಚು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಕೃಷಿ ಸಚಿವ ಚೆಲುವಯರಾಯಸ್ವಾಮಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಬರಗಾಲ ಎಂದು ಘೋಷಿಸಲು ಮಾರ್ಗಸೂಚಿ ಪಾಲಿಸಬೇಕು. ಬರಪೀಡಿತ ಪ್ರದೇಶಗಳ ಬಗ್ಗೆ ನಮಗೆ ಸಂಪೂರ್ಣ ಮಾಹಿತಿ ಇನ್ನೂ ಬಂದಿಲ್ಲ, ಇದಕ್ಕೆ ಮಾರ್ಗಸೂಚಿ ಅಡ್ಡಿಬಂದಿರುವುದರಿಂದ ಘೋಷಣೆ ಮಾಡಲು ಆಗುತ್ತಿಲ್ಲಸಂಪೂರ್ಣ ಮಾಹಿತಿ ತರಿಸಿಕೊಂಡು ಈ ಬಗ್ಗೆ ಘೋಷಣೆ ಮಾಡಲಿದ್ದೇವೆ , 100ಕ್ಕೂ ಹೆಚ್ಚು ತಾಲೂಕುಗಳು ಬರಪೀಡಿತ ಎಂದು ಘೋಷಿಸುತ್ತೇವೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.

ಮೋಡ ಬಿತ್ತನೆ ಬಗ್ಗೆ ಚಿಂತನೆಯಿಲ್ಲ, ಅದರಿಂದ ಪ್ರಯೋಜನವಾಗಿಲ್ಲ. ಈ ಹಿಂದೆ ಮೋಡ ಬಿತ್ತನೆ ಮಾಡಿದಾಗ ಪ್ರಯೋಜನವಾಗಿರಲಿಲ್ಲ ಎಂದು ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read