BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಸ್ನೇಹಿತನನ್ನೇ ಕೊಚ್ಚಿ ಕೊಂದು ದುಷ್ಕರ್ಮಿಗಳು

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ದುಷ್ಕರ್ಮಿಗಳು ಸ್ನೇಹಿತನನ್ನೇ ಕೊಚ್ಚಿ ಕೊಂದಿರುವ ಘಟನೆ ನಡೆದಿದೆ.

ಬೆಂಗಳೂರಿನ ಬಳೆಪೇಟೆ ರಸ್ತೆಯಲ್ಲಿರುವ ರಾಜ್ ಕುಮಾರ್ ಪ್ರತಿಮೆ ಬಳಿ ಕುಡಿದ ಮತ್ತಿನಲ್ಲಿ ಸ್ನೇಹಿತನನ್ನೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ರಾತ್ರಿ ಜೊತೆಯಾಗಿ ಎಣ್ಣೆ ಪಾರ್ಟಿ ಮಾಡಿದ್ದ ಗೆಳೆಯರು, ಪಾರ್ಟಿ ಮುಗಿದ ಬಳಿಕ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಈ ವೇಳೆ ಎಲ್ಲರೂ ಸೇರಿ ಸುರೇಶ್ ಎಂಬಾತನನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಹತ್ಯೆಯಾದ ಸುರೇಶ್ ತುಮಕೂರು ಜಿಲ್ಲೆಯ ಹುಲಿಯೂರುದುರ್ಗದ ಮೂಲದವನು ಎಂದು ಗುರುತಿಸಲಾಗಿದ್ದು, ಬೆಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ. ಸದ್ಯ ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read