BREAKING : ‘ಚೈತ್ರಾ & ಗ್ಯಾಂಗ್’ ಮಾದರಿಯಲ್ಲೇ ಮತ್ತೊಂದು ಪ್ರಕರಣ ಬಯಲು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ 21 ಲಕ್ಷ ವಂಚನೆ

ಬೆಂಗಳೂರು : ಉದ್ಯಮಿಯೊಬ್ಬರಿಗೆ 5 ಕೋಟಿ ರೂ ಹಣ ವಂಚಿಸಿರುವ ‘ಚೈತ್ರಾ ಅಂಡ್ ಗ್ಯಾಂಗ್’ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ.

ಇದರ ನಡುವೆ ‘ಚೈತ್ರಾ ಗ್ಯಾಂಗ್’ ಮಾದರಿಯಲ್ಲೇ ಮತ್ತೊಂದು ವಂಚನೆ ಪ್ರಕರಣ ನಡೆದಿರುವುದು ಬಯಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷಾಂತರ ಹಣ ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ.

ಏನಿದು ಘಟನೆ..? ಯಾರದ್ದು ಕೈವಾಡ

ಯೆಸ್, ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿ ತಿಮ್ಮಾರೆಡ್ಡಿ ಅವರೇ ಹಣ ಕಳೆದುಕೊಂಡ ವ್ಯಕ್ತಿ. ಅವರ ಪತ್ನಿ ಗಾಯತ್ರಿ ತಿಮ್ಮಾರೆಡ್ಡಿ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಹೋಗಿ 21 ಲಕ್ಷ ಹಣ ಕಳೆದುಕೊಂಡಿದ್ದಾರೆ.

ದೆಹಲಿ ಮೂಲದ ವಿಶಾಲ್ ನಾಗ್ ಹಾಗೂ ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರಿಗೆ 21 ಲಕ್ಷ ಹಣ ನೀಡಿ ತಿಮ್ಮಾರೆಡ್ಡಿ ಮೋಸದ ಜಾಲದಲ್ಲಿ ಸಿಲುಕಿದ್ದಾರೆ.ಹಣಕ್ಕಾಗಿ ಮಾಸ್ಟರ್ ಪ್ಲ್ಯಾನ್ ಮಾಡಿದ ಆರೋಪಿಗಳು ನಮಗೆ ಬಿಜೆಪಿ ಆ ನಾಯಕರು ಗೊತ್ತು, ಈ ನಾಯಕರು ಗೊತ್ತು. ನಿಮಗೆ ಖಂಡಿತ ಟಿಕೆಟ್ ಕೊಡಿಸುತ್ತೇವೆ ಎಂದು ನಂಬಿಸಿದ್ದಾರೆ. ಆರೋಪಿಗಳ ಮಾತು ನಂಬಿದ ತಿಮ್ಮಾರೆಡ್ಡಿ ಹಣ ಕೊಟ್ಟು ಮೋಸ ಹೋಗಿದ್ದಾರೆ.
ಈ ಕುರಿತು ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಬಂಧನಕ್ಕೆ ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read