ಹುಬ್ಬಳ್ಳಿ : ‘ಈದ್ಗಾ’ ಮೈದಾನದಲ್ಲಿ ನಾಳೆ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತಿದ್ದು, ಈ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಗಣೇಶನನ್ನು ಅದ್ದೂರಿಯಾಗಿ ಸ್ವಾಗತಿಸಿದ ಹಿಂದೂ ಪರ ಸಂಘಟನೆಗಳ ಸಾವಿರಾರು ಮುಖಂಡರು, ನಗರದ ಮೂರು ಸಾವಿರ ಮಠದಲ್ಲಿ ಗಣೇಶ ಮೂರ್ತಿಯನ್ನು ಇರಿಸಿದ್ದಾರೆ. ಸಾಕಷ್ಟು ವಿವಾದದ ನಡುವೆ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಅನುಮತಿ ಕೊಡಲಾಗಿದೆ.
ಹುಬ್ಬಳ್ಳಿಯಲ್ಲಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸುತ್ತಿದೆ. ವಿವಾದಿತ ಈದ್ಗಾ ಮೈದಾನದ ಸುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ನಾಳೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈದ್ಗಾ ಮೈದಾನಕ್ಕೆ ತಡರಾತ್ರಿ ವಾಣಿಜ್ಯ ನಗರಿ ಹುಬ್ಬಳ್ಳಿಗೆ ಪೊಲೀಸ್ ಭದ್ರತೆ ನಡುವೆ ಗಣೇಶ ಮೂರ್ತಿಯನ್ನು ತರಲಾಗಿದೆ.