alex Certify ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ: ಸುಪ್ರೀಂ ಕೋರ್ಟ್ ಆದೇಶದ ನಡುವೆಯೂ ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಬೆನ್ನಲ್ಲೇ ಶುಕ್ರವಾರ ಸಂಪುಟ ಸಭೆ ನಡೆಯಲಿದ್ದು, ರೈತರ ಪರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.

ರಾಜ್ಯದ ರೈತರ ಹಿತ ಕಾಯಲು ಹೊಸ ತಂತ್ರ ಕೈಗೊಳ್ಳಲಾಗುವುದು. ರೈತರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಿದೆ. ಇದನ್ನು ಸದ್ಯಕ್ಕೆ ಬಹಿರಂಗಪಡಿಸಲಾಗದು ಎಂದು ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾದ ಪರಿಸ್ಥಿತಿ ರಾಜ್ಯ ಸರ್ಕಾರಕ್ಕೆ ಬಂದಿದೆ. ಆದರೆ, ನಮಗೆ ಎಲ್ಲಾ ಬಾಗಿಲು ಬಂದ್ ಆಗಿಲ್ಲ. ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಮುಂದೆ ಹೋಗಲು ಸುಪ್ರೀಂಕೋರ್ಟ್ ತಿಳಿಸಿದೆ. ಹೇಗಾದರೂ ರಾಜ್ಯದ ರೈತರ ಹಿತ ಕಾಪಾಡಲು ಸರ್ಕಾರ ಬದ್ದವಾಗಿದ್ದು, ಈ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಸದ್ಯಕ್ಕೆ ಎಲ್ಲವನ್ನು ಬಹಿರಂಗವಾಗಿ ಹೇಳಲು ಸಾಧ್ಯವಾಗದು. ಹಾಗೆ ಬಹಿರಂಗ ಮಾಡಿದರೆ ಸುಪ್ರೀಂಕೋರ್ಟ್ ಕೆಂಗಣ್ಣಿಗೆ ಗುರಿಯಾಗುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...