ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಬಿಗ್ ರಿಲೀಫ್; ಮುಚ್ಚಳಿಕೆ ಪತ್ರ ಪಡೆದು ಮಾನ್ಯತೆ ನವೀಕರಿಸಲು ನಿರ್ಧಾರ

ಶಾಲೆಗಳ ಪುನರಾರಂಭ ಕುರಿತು ಸೋಮವಾರ ಶಿಕ್ಷಣ ಸಚಿವರ ನೇತೃತ್ವದಲ್ಲಿ ಮಹತ್ವದ ಸಭೆ

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಬಿಗ್ ರಿಲೀಫ್ ನೀಡಿದೆ. ಮಾನ್ಯತೆ ನವೀಕರಿಸುವ ಸಲುವಾಗಿ ಕಟ್ಟಡ ಸುರಕ್ಷತೆ ಸೇರಿದಂತೆ ಹಲವು ಪ್ರಮಾಣ ಪತ್ರಗಳನ್ನು ನೀಡಬೇಕಿದ್ದು, ಆದರೆ ಸಕಾಲದಲ್ಲಿ ಇವುಗಳನ್ನು ಪಡೆಯಲು ಸಾಧ್ಯವಾಗದ ಕಾರಣ ಮುಚ್ಚಳಿಕೆ ಪತ್ರ ಪಡೆದು ಮಾನ್ಯತೆ ನವೀಕರಿಸಲು ತೀರ್ಮಾನಿಸಲಾಗಿದೆ.

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಶಾಲಾ ಆಡಳಿತ ಮಂಡಳಿಯಿಂದ ಮುಚ್ಚಳಿಕೆ ಪತ್ರ ಪಡೆದು ಒಂದು ವರ್ಷಕ್ಕೆ ಸೀಮಿತವಾಗುವಂತೆ (2023 – 24ನೇ ಸಾಲಿಗೆ) ಮಾನ್ಯತೆ ನವೀಕರಿಸಲಾಗುತ್ತಿದ್ದು, ಖಾಸಗಿ ಶಾಲೆಗಳು ಕಟ್ಟಡ ಸುರಕ್ಷತೆ ಮತ್ತು ಅಗ್ನಿ ಸುರಕ್ಷತೆ ಪ್ರಮಾಣ ಪತ್ರ, ಭೂ ಪರಿವರ್ತನಾ ಆದೇಶ ಪತ್ರಗಳನ್ನು ಬಳಿಕ ಸಲ್ಲಿಸಬೇಕಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ. ಕಾವೇರಿ ಸುತ್ತೋಲೆಯಲ್ಲಿ ಮಾಹಿತಿ ನೀಡಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಖಾಸಗಿ ಪ್ರಾಥಮಿಕ, ಪ್ರೌಢಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, ಈ ಆದೇಶದಿಂದ ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಮುಚ್ಚಳಿಕೆ ಪತ್ರವನ್ನು ಸಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read