BIG NEWS : ನಾಡಿದ್ದು ‘ಬೆಂಗಳೂರು ಬಂದ್’ ಕನ್ಪರ್ಮ್ : ಕುರುಬೂರು ಶಾಂತಕುಮಾರ್ ಸ್ಪಷ್ಟನೆ

ಬೆಂಗಳೂರು : ನಾಡಿದ್ದು ಮಂಗಳವಾರ ‘ಬೆಂಗಳೂರು ಬಂದ್’ ಕನ್ಪರ್ಮ್ , ಬಂದ್ ಮಾಡೇ ಮಾಡ್ತೀವಿ ಎಂದು ರಾಜ್ಯ ರೈತ ಸಂಘಟನೆಗಳ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಕುರುಬೂರು ಶಾಂತ್ ಕುಮಾರ್ ಯಾವುದೇ ಕಾರಣಕ್ಕೂ ಬಂದ್ ಹಿಂಪಡೆಯುವ ಪ್ರಶ್ನೆಯೇ ಇಲ್ಲ, ಮಂಗಳವಾರ ಬಂದ್ ಮಾಡೇ ಮಾಡುತ್ತೇವೆ. ಎಲ್ಲರೂ ಕೂಡ ಬೆಂಬಲ ಕೊಡಿ ಎಂದು ಹೇಳಿದ್ದಾರೆ. ನಗರದಲ್ಲಿ ಫ್ರೀಡಂ ಪಾರ್ಕ್ ವರೆಗೆ ರ್ಯಾಲಿ ನಡೆಸಿ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆಂಡ್ ವರ್ಕರ್ಸ್ ಫೆಡರೇಷನ್ ಬೆಂಬಲ ಘೋಷಿಸಿದೆ. ಬಂದ್ ಗೆ ನಮ್ಮ ಸಂಪೂರ್ಣ ಬೆಂಬಲವಿರಲಿದೆ. ಅಂದು ಸಾರಿಗೆ ಬಸ್ ಗಳನ್ನು ರೋಡಿಗೆ ಇಳಿಸುವುದಿಲ್ಲ ಎಂದು ಕೆ.ಎಸ್.ಆರ್. ಟಿ.ಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ ಅನಂತಸುಬ್ಬರಾವ್ ತಿಳಿಸಿದ್ದಾರೆ. ಬೆಂಗಳೂರು ಬಂದ್ ಗೆ ಓಲಾ, ಊಬರ್ ಸೇರಿದಂತೆ ಕ್ಯಾಬ್ ಸಂಸ್ಥೆಗಳು ಬೆಂಬಲ ಘೋಷಿಸಿದೆ. ಅದೇ ರೀತಿ ಹೋಟೆಲ್ ಉದ್ಯಮಗಳು ಕೂಡ ಬೆಂಗಳೂರು ಬಂದ್ ಗೆ ಬೆಂಬಲ ನೀಡಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read