ಜನವರಿ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ : ಮಾಜಿ ಸಚಿವ ಆರ್. ಅಶೋಕ್ ಬಾಂಬ್

ಬೆಂಗಳೂರು :  ಜನವರಿ ಬಳಿಕ  ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಚಿವ ಆರ್. ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಜನವರಿ ನಂತರ ಕಾಂಗ್ರೆಸ್ ಸರ್ಕಾರ ಬಿದ್ದೋಗುತ್ತೆ, ಕಾಂಗ್ರೆಸ್ನಲ್ಲಿ ಹಲವು ಗ್ಯಾಂಗ್ಗಳಾಗಿವೆ , ಆದ್ದರಿಂದ ಈ ಸರ್ಕಾರ ಬಹಳ ದಿನ ನಡೆಯುವುದಿಲ್ಲ ಎಂದು ಮಾಜಿ ಸಚಿವ ಆರ್. ಅಶೋಕ್ ಹೇಳಿದರು.

ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಅವರನ್ನ ಕರೆದು ಮಾತನಾಡುವ ಕೆಲಸ ಮಾಡುತ್ತೇವೆ. ಅವರು ಮುಂಚೆ ಅಲ್ಲಿದ್ದವರಲ್ಲ, ಅವರನ್ನ ಬಿಜೆಪಿಗೆ ನಾನೇ ಕರೆದುಕೊಂಡು ಬಂದಿದ್ದು, ಹಾಗಾಗಿ ಆ ರೀತಿ ಮಾತನಾಡಿದ್ದಾರೆ ಎಂದರು.ಇತ್ತೀಚೆಗಷ್ಟೇ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಭಾರಿ ಚರ್ಚೆಯಾಗಿತ್ತು, ಶೀಘ್ರವೇ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ ಎಂಬ ವಿಚಾರ ಬಿಜೆಪಿ ಪಾಳಯದಲ್ಲಿ ತಲ್ಲಣ ಉಂಟು ಮಾಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read