ಅಲೆಮಾರಿ, ಅರೆ ಅಲೆಮಾರಿ ಸಮುದಾಯಕ್ಕೆ ಗುಡ್ ನ್ಯೂಸ್ : ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದಿಂದ 2023-24ನೇ ಸಾಲಿಗೆ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಅರಿವು -ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸತು), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ ಗಳ ಸಹಯೋಗದೊಂದಿಗೆ), ಮತ್ತು ಸ್ವಾವಲಂಬಿ ಸಾರಥಿ ಯೋಜನೆಗೆ ಸಹಾಯಧನ ಪಡೆಯಲು ಅಲೆಮಾರಿ ನಿಗಮಕ್ಕೆ ಸೇರಿದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕರ್ನಾಟಕ ರಾಜ್ಯ ಖಾಯಂ ನಿವಾಸಿಯಾಗಿರಬೇಕು, ಅಲೆಮಾರಿ ಮತ್ತು ಅರೆ ಅಲೆಮಾರಿ ಹಾಗೂ ಉಪಜಾತಿಗಳಿಗೆ ಸೇರಿರಬೇಕು, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ, ವಯೋಮಿತಿ 18 ರಿಂದ 55 ವರ್ಷಗಳ ಮೀತಿಯಲ್ಲಿರಬೇಕು, ಅರ್ಜಿಗಳನ್ನು ಸೇವ ಸಿಂಧು ಮೂಲಕ ನವೆಂಬರ್ 03 ರೊಳಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು ಅಥವಾ ನಿಗಮದ ವೆಬ್ ಸೈಟ್ : www.kaad.karnataka.gov.in ರಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-22374832, 8050770004, 8050770005 ಮೂಲಕ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 080-23539600/ 23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆಯ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read