
ನವದೆಹಲಿ : ಉಜ್ವಲ ಯೋಜನೆ ಫಲಾನುಭವಿಗಳಿಗೆ ಕೇಂದ್ರ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಬೆಂಬಲಿಸುವ ಉದ್ದೇಶದಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್ಪಿಜಿ) ಸಿಲಿಂಡರ್ಗಳ ಮೇಲೆ ಒಟ್ಟು 300 ರೂ.ಗಳ ಹೆಚ್ಚುವರಿ ಸಬ್ಸಿಡಿಯನ್ನು ಕೇಂದ್ರ ಸರ್ಕಾರ ಅನುಮೋದಿಸಿದೆ.
ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ಹೆಚ್ಚಳವನ್ನು ದೃಢಪಡಿಸಿದ್ದು, “ಉಜ್ವಲ ಯೋಜನೆಯ ಫಲಾನುಭವಿಗಳು ಈಗ ಹಿಂದಿನ 200 ರೂ.ಗಳಿಂದ 300 ರೂ.ಗಳ ಸಬ್ಸಿಡಿಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.
ಉಜ್ವಲ ಯೋಜನೆಯಡಿ, ಅರ್ಹ ಫಲಾನುಭವಿಗಳು ಈಗ ಗ್ಯಾಸ್ ಸಿಲಿಂಡರ್ಗಳ ಮೇಲೆ 300 ರೂ.ಗಳ ಹೆಚ್ಚಿನ ಸಬ್ಸಿಡಿಯನ್ನು ಪಡೆಯುತ್ತಾರೆ, ಇದು ಹಿಂದಿನ 200 ರೂ.ಗಳ ಸಬ್ಸಿಡಿಯಿಂದ ಹೆಚ್ಚಳವನ್ನು ಸೂಚಿಸುತ್ತದೆ. ಇದರೊಂದಿಗೆ, ಉಜ್ವಲ ಫಲಾನುಭವಿಗಳು ಒಟ್ಟು 500 ರೂ.ಗಳ ವೆಚ್ಚದಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ಖರೀದಿಸಲು ಸಾಧ್ಯವಾಗುತ್ತದೆ.
ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ ಮಹಿಳಾ ಸಬಲೀಕರಣದ ಉದ್ದೇಶದಿಂದ ಉಚಿತ ಎಲ್.ಪಿ.ಜಿ ವಿತರಣೆ ಮಾಡಲಾಗುತ್ತದೆ.
ಉಜ್ವಲ್ ಯೋಜನೆಯಡಿ ಮೂರನೇ ಹಂತದ ಎಲ್.ಪಿ.ಜಿ ಸಂಪರ್ಕ ಪಡೆಯುವ ಗ್ರಾಹಕರಿಗೆ ಎರಡು ಬರ್ನರ್ ಸ್ಟೌವ್, 14.2 ಕೆ.ಜಿ ಸಿಲಿಂಡರ್ ಮತ್ತು ಎರಡು 5 ಕೆ.ಜಿ ಸಿಲಿಂಡರ್, ಒಂದು ರೆಗ್ಯುಲೇಟರ್, ಒಂದು ಸುರಕ್ಷಾ ಹೋಸ್, ಡಿ.ಜಿ.ಸಿ.ಸಿ ಬುಕ್ಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಇದುವರೆಗೂ ಎಲ್.ಪಿ.ಜಿ ಅನಿಲ ಸಂಪರ್ಕಗಳನ್ನು ಹೊಂದಿರದ ಕುಟುಂಬದ ಮಹಿಳೆಯರು ಅಗತ್ಯ ದಾಖಲೆಗಳೊಂದಿಗೆ ಹತ್ತಿರದ ಎಲ್.ಪಿ.ಜಿ ವಿತರಕ ಕಂಪನಿಗೆ ಭೇಟಿ ನೀಡಿ ಸೌಲಭ್ಯವನ್ನು ಪಡೆಯಬಹುದು ಮತ್ತು ಕ್ಯೂ.ಆರ್.ಕೋಡ್ ಮೂಲಕ ಯೋಜನೆ ಮಾಹಿತಿ ಪಡೆಯಬಹುದಾಗಿದೆ