BREAKING: 50 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಬಲೆಗೆ: ಇನ್ಸ್ ಪೆಕ್ಟರ್ ಗಾಗಿ ಹುಡುಕಾಟ

ಬೆಂಗಳೂರು: ಪ್ರಕರಣವೊಂದರ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಇನ್ಸ್ ಪೆಕ್ಟರ್, ಪಿಎಸ್ಐ ಲಂಚಕ್ಕೆ ಬೇಡಿಕೆ ಇಡಲಾಗಿದ್ದು, ಲಂಚದ ಹಣ ಸ್ವೀಕರಿಸುವಾಗ ರಾಜಾಜಿನಗರ ಠಾಣೆಯ ಹೆಡ್ ಕಾನ್ಸ್ ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹೆಡ್ ಕಾನ್ಸ್ ಟೇಬಲ್ ಆಂಜನೇಯ 50,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ. ರಾಜಾಜಿನಗರ ಠಾಣೆಯ ಇನ್ಸ್ ಪೆಕ್ಟರ್ ಲಕ್ಷ್ಮಣಗೌಡ, ಪಿಎಸ್ಐ ಮಾರುತಿ ಅವರಿಗಾಗಿ ಹುಡುಕಾಟ ನಡೆಸಲಾಗಿದೆ ಎನ್ನಲಾಗಿದೆ.

ಶ್ರೀಸಾಗರ್ ಎಂಬುವವರಿಂದ ಆಂಜನೇಯ 50,000 ಲಂಚ ಸ್ವೀಕರಿಸುತ್ತಿದ್ದರು. ಶ್ರೀಸಾಗರ್ ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read