BREAKING : ಹುಲಿ ಉಗುರು ಪೆಂಡೆಂಟ್ ಕೇಸ್ : ಚಿಕ್ಕಮಗಳೂರಿನಲ್ಲಿ ಮತ್ತಿಬ್ಬರು ಅರೆಸ್ಟ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಹುಲಿ ಉಗುರು ಪೆಂಡೆಂಟ್ ಗಳನ್ನು ಧರಿಸಿದ್ದ ಮತ್ತಿಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ನಿಷೇಧಿತ ವಸ್ತುವಾದ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಸತೀಶ್ ಮತ್ತು ರಂಜಿತ್ ಎಂಬುವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.ಬಂಧಿತ ವ್ಯಕ್ತಿಗಳಿಂದ ಪೆಂಡೆಂಟ್ ಅನ್ನು ಸಹ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಸತೀಶ್ ಮತ್ತು ರಂಜಿತ್ ಇಬ್ಬರೂ ಹುಲ್ಲೆಮನೆ ಮತ್ತು ಭಾರತಿಬೈಲು ಗ್ರಾಮದ ನಿವಾಸಿಗಳಾಗಿದ್ದು, ಹುಲಿ ಉಗುರು ಪೆಂಡೆಂಟ್ ಗಳನ್ನು ಧರಿಸಿದ್ದರು ಎನ್ನಲಾಗಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳು ಬಂಧನದಿಂದ ತಪ್ಪಿಸಿಕೊಂಡಿದ್ದು, ಅರಣ್ಯ ಇಲಾಖೆ ಶೋಧ ಕಾರ್ಯಾಚರನೆ ನಡೆಸಿದೆ.ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಸ್ಪರ್ಧಿ ವರ್ತೂರು ಸುರೇಶ್ ಅವರನ್ನು ಹುಲಿ ಉಗುರು ಪೆಂಡೆಂಟ್ ಧರಿಸಿದ್ದಕ್ಕಾಗಿ ಬಿಗ್ ಬಾಸ್ ಮನೆಯಿಂದ ಬಂಧಿಸಲಾಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read