ಅತ್ತಿಗೆ ಜೊತೆ ಅಕ್ರಮ ಸಂಬಂಧ ಬೆಳೆಸಿದ ಮೈದುನನಿಂದ ಘೋರ ಕೃತ್ಯ

ಬೆಂಗಳೂರು: ಅತ್ತಿಗೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ ವ್ಯಕ್ತಿಯೊಬ್ಬ ಅಣ್ಣನನ್ನೇ ಕೊಲೆ ಮಾಡಿದ ಆರೋಪ ಕೇಳಿ ಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ದೊಡ್ಡಮಂಕಲಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗಂಗರಾಜು(35) ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಗಂಗರಾಜುವಿನ ತಮ್ಮ ರವಿ ಅಣ್ಣನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ. 5 ವರ್ಷಗಳ ಹಿಂದೆ ಅತ್ತಿಗೆಯನ್ನು ಕರೆದುಕೊಂಡು ಓಡಿಹೋಗಿದ್ದ. ಗಂಗರಾಜು ಮೂವರು ಮಕ್ಕಳನ್ನು ಅನಾಥಾಶ್ರಮದಲ್ಲಿ ಬಿಟ್ಟಿದ್ದ.

ಇತ್ತೀಚೆಗೆ ರವಿ, ಅತ್ತಿಗೆಯೊಂದಿಗೆ ವಾಪಸ್ ಬಂದಿದ್ದಾನೆ. ಪತ್ನಿ, ತಮ್ಮನೊಂದಿಗೆ ಗಂಗರಾಜು ಜಗಳವಾಡಿದ್ದಾನೆ. ಗಲಾಟೆ ವೇಳೆಯಲ್ಲಿ ಗಂಗರಾಜು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಎಸ್.ಪಿ. ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read