alex Certify BIG UPDATE : ಚಿಕ್ಕಬಳ್ಳಾಪುರ ಭೀಕರ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಚಿಕ್ಕಬಳ್ಳಾಪುರ ಭೀಕರ ಅಪಘಾತ ಪ್ರಕರಣ : ಸಾವಿನ ಸಂಖ್ಯೆ 13 ಕ್ಕೇರಿಕೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 13 ಕ್ಕೇರಿಕೆಯಾಗಿದೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಬ್ಬಮ್ಮ ಎಂಬುವವರು ಮೃತಪಟ್ಟಿದ್ದು, ಈ ಮೂಲಕ ಸಾವಿನ ಸಂಖ್ಯೆ 13 ಕ್ಕೇರಿಕೆಯಾಗಿದೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಅಪಘಾತದಲ್ಲಿ 13 ಮಂದಿ ಸಾವನ್ನಪ್ಪಿದ್ದಾರೆ.

ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದ್ದು, ಅದರಿಂದ ಮೃತದೇಹಗಳನ್ನು ಹೊರತೆಗೆಯಲು, ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...