ಬೆಳೆ ನಷ್ಟ, ಬರ ಪರಿಹಾರಕ್ಕೆ ಒಂದೇ ಒಂದು ರೂಪಾಯಿ ಬಿಡುಗಡೆ ಮಾಡದ ಸರ್ಕಾರ: ಈಶ್ವರಪ್ಪ ಆಕ್ರೋಶ

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ ಲೆಕ್ಕ ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯದ ಒಬ್ಬನೇ ಒಬ್ಬ ಉಸ್ತುವಾರಿ ಸಚಿವ ರೈತರ ಸಮಸ್ಯೆ ಕೇಳಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ, ಡಿಕೆಶಿ ಬಡಿದಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ರೈತರ ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯದಲ್ಲಿ ಈ ಸರ್ಕಾರ ತಂದಿದ್ದಾರೆ. ಇದುವರೆಗೂ ಬೆಳೆ ಹಾನಿ, ಬರ ಪರಿಹಾರಕ್ಕೆ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ವರಿಷ್ಠರು ಹೇಳಿದ ಮೇಲೆಯೂ ನಿಮ್ಮಿಷ್ಟದ ಹೇಳಿಕೆ ಕೊಡುತ್ತಿದ್ದೀರಿ ಅಂದರೆ ನಿಮ್ಮಲ್ಲಿ ಶಿಸ್ತು ಇಲ್ಲ, ರೈತರಿಗೆ ಬಗ್ಗೆ ನಿಮಗೆ ಕಾಳಜಿ ಇಲ್ಲ. ಹೀಗಾಗಿ ಆಡಳಿತ ಚುಕ್ಕಾಣಿ ಹಿಡಿಯುವ ಅಧಿಕಾರ ಇವರಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read