BREAKING : ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣ : ಆರೋಪಿ ಅರೆಸ್ಟ್

ಮುಂಬೈ : ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು  ತೆಲಂಗಾಣ ಮೂಲದ  ಗಣೇಶ್ ವನರ್ಪಡಿ (19) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದ್ದು, ನ.8 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಗೆ ಈ ಹಿಂದೆ 400 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದ ಅದೇ ವ್ಯಕ್ತಿಯಿಂದ ಇನ್ನೂ ಎರಡು ಬೆದರಿಕೆ ಇಮೇಲ್ ಗಳು ಬಂದಿವೆ. ಹಿಂದಿನ ಇಮೇಲ್ ಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಮತ್ತೆ ಇ ಮೇಲ್ ಬಂದಿತ್ತು. “ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿಗೆ ಅಕ್ಟೋಬರ್ 31 ಮತ್ತು ನವೆಂಬರ್ 1 ರ ನಡುವೆ ಮತ್ತೊಮ್ಮೆ ಎರಡು ಬೆದರಿಕೆ ಇಮೇಲ್ ಗಳು ಬಂದಿವೆ, ಹಿಂದಿನ ಇಮೇಲ್ ಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿತ್ತು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read