BIG NEWS: ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಪತ್ತೆ ಪ್ರಕರಣದ ಬೆನ್ನಲ್ಲೇ ಅಲರ್ಟ್ ಆಗಿರುವ ಪೊಲೀಸರು ನಕಲಿ ದಾಖಲಾತಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ವಿದೇಶಿಯರಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಡುತ್ತಿದ್ದ ಕಂಪ್ಯೂಟರ್ ಅಂಗಡಿ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದ ಕೃಷ್ಣಮೂರ್ತಿ ಎಂಬ ಆರೋಪಿಯನ್ನು ಗಂಗಮ್ಮನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಈತ ವಿದೇಶಿಗರಿಗೆ ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್, ಪಾಸ್ ಪೋರ್ಟ್ ತಯಾರು ಮಾಡಿ ಕೊಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಅಂಗಡಿ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಾನೂನು ಬಾಹಿರಚಟುವಟಿಕೆಗಳಿಗೆ ಬ್ರೇಕ್ ಹಾಕಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read