ಕಾಫಿ ಬೆಳೆಗಾರರಿಗೆ ಸಿಎಂ ದೀಪಾವಳಿ ಗಿಫ್ಟ್: ವಿದ್ಯುತ್ ಬಿಲ್ ಬಡ್ಡಿ ಮನ್ನಾ ಘೋಷಣೆ

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪಾವಳಿ ಹೊತ್ತಲ್ಲೇ ಕಾಫಿ ಬೆಳೆಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.

ಹಾಸನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ. ಅಸಲು ಅಥವಾ ಬಡ್ಡಿಮನ್ನಾಗೆ ಸಭೆಯಲ್ಲಿ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮನವಿ ಮಾಡಿದ್ದರು. ವಿದ್ಯುತ್ ಬಿಲ್ ಕಟ್ಟದಿರುವುದಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ ಎಂದು ಹೇಳಿದ್ದರು.

ಈ ಬಗ್ಗೆ ಮಾಹಿತಿ ಪಡೆದ ಸಿಎಂ ವಿದ್ಯುತ್ ಬಿಲ್ ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು. ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read