ಪ್ರಸಾದ ಸೇವಿಸಿದ 50 ಕ್ಕೂ ಅಧಿಕ ಮಂದಿ ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿದ 50ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ರಾಮನಗರದ ಯಾರಬ್ ನಗರದಲ್ಲಿ ನಡೆದಿದೆ.

ಪೀರನ್ ಶಾ ವಲಿ ದರ್ಗಾದ ಉರುಸ್ ಪ್ರಯುಕ್ತ ಪ್ರಸಾದ ನೀಡಲಾಗಿದ್ದು, 50ಕ್ಕೂ ಹೆಚ್ಚು ಜನ ವಾಂತಿ-ಬೇಧಿಯಿಂದ ಅಸ್ವಸ್ಥರಾಗಿದ್ದಾರೆ. ದರ್ಗಾದಲ್ಲಿ ಮಧ್ಯಾಹ್ನ ವಿತರಿಸಿದ ಮಲಿದಾ ಸಿಹಿ ಪದಾರ್ಥ ಸೇವಿಸಿದ ನಂತರ ಭಕ್ತರಿಗೆ ವಾಂತಿ ಬೇಧಿ ಶುರುವಾಗಿದ್ದು, ಅದರಲ್ಲಿ ವಿಷಕಾರಿ ಅಂಶ ಇರುವ ಬಗ್ಗೆ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ.

ಅಸ್ವಸ್ಥರಾದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಸಕ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಸ್ವಸ್ಥ ಸಿಬ್ಬಂದಿಗೆ ಅಗತ್ಯ ವ್ಯವಸ್ಥೆ ಮಾಡಿ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಪರೀಕ್ಷೆಗಾಗಿ ಸಿಹಿ ತಿಂಡಿ ಮಾದರಿಯನ್ನು ಪಡೆದುಕೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read