alex Certify ಪತ್ನಿಯಿಂದ ದೂರವಾಗಿದ್ದ ವ್ಯಕ್ತಿಯಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಮಹಿಳೆ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯಿಂದ ದೂರವಾಗಿದ್ದ ವ್ಯಕ್ತಿಯಿಂದ ಘೋರ ಕೃತ್ಯ: ಚಾಕುವಿನಿಂದ ಇರಿದು ಮಹಿಳೆ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಮಹಿಳೆ ಕೊಲೆ ಮಾಡಲಾಗಿದೆ. ಬೆಂಗಳೂರಿನ ಜೆಜೆ ನಗರದ ನಾಲ್ಕನೇ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಪರ್ವೀನ್ ತಾಜ್ ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಅವರನ್ನು ಕೊಲೆ ಮಾಡಿ ಮಹಮ್ಮದ್ ಜುನೈದ್ ಪರಾರಿಯಾಗಿದ್ದಾನೆ. ಪತ್ನಿಯಿಂದ ಆರೋಪಿ ಮಹಮ್ಮದ್ ಜುನೈದ್ ದೂರವಿದ್ದ. ಈ ವಿಚಾರ ಠಾಣೆ ಮೆಟ್ಟಿಲೇರಿ ಬುದ್ಧಿವಾದ ಹೇಳಿ ಕಳುಹಿಸಲಾಗಿತ್ತು. ಪತ್ನಿ ವಿಚಾರವಾಗಿ ಮಾನಸಿಕವಾಗಿ ಜುನೈದ್ ನೊಂದಿದ್ದ.

ಈ ವೇಳೆ ಆರೋಪಿಗೆ ಆತನ ಪತ್ನಿ ಸಂಬಂಧಿಯಾಗಿರುವ ಪರ್ವೀನ್ ತಾಜ್ ಹತ್ತಿರವಾಗಿದ್ದರು. ಇತ್ತೀಚೆಗೆ ಅವರೂ ಸಹ ಜುನೈದ್ ನನ್ನು ದೂರ ಮಾಡಿದ್ದರು. ಇದರಿಂದ ಕೋಪಗೊಂಡು ಪರ್ವೀನ್ ತಾಜ್ ಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಭಂದ ಜೆಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...