ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಹಾಸ್ಟೆಲ್ ವಾರ್ಡನ್ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಸುನಗ ಗ್ರಾಮದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ ಹಾಸ್ಟೆಲ್ ವಾರ್ಡನ್ ಸುರೇಶ್ ಸುಂಕನಗೌಡ ಅವರನ್ನು ಅಮಾನತು ಮಾಡಲಾಗಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸುರೇಶ್ ಅವರನ್ನು ಅಮಾನತು ಮಾಡಲಾಗಿದೆ.

ಮನೆಗೆ ಫೋನ್ ಮಾಡಲು ವಿದ್ಯಾರ್ಥಿನಿಯರು ಫೋನ್ ಕೇಳಿದಾಗ ಹಾಸ್ಟೆಲ್ ಸಮೀಪವೇ ಇರುವ ತನ್ನ ಮನೆಗೆ ಕರೆಸಿಕೊಳ್ಳುತ್ತಿದ್ದ ಸುರೇಶ್ ವಿದ್ಯಾರ್ಥಿನಿಯರ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ವಸತಿ ಶಾಲೆಯ ಪ್ರಾಂಶುಪಾಲ ಮತ್ತು ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದಾರೆ.

ಮಾಹಿತಿ ತಿಳಿದ ಜಿಲ್ಲಾ ಪಂಚಾಯಿತಿ ಸಿಇಒ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಸ್ಟೆಲ್ ಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ವಾರ್ಡನ್ ಗೆ ನೋಟಿಸ್ ನೀಡಿ ಬಾಗಲಕೋಟೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಮಾಹಿತಿ ಪಡೆದಿದ್ದಾರೆ. ವಾರ್ಡನ್ ಉತ್ತರ ಸಮಂಜಸವಾಗಿಲ್ಲದ ಕಾರಣ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಕ್ರಮಕ್ಕೆ ವರದಿ ನೀಡಲಾಗಿದ್ದು, ವರದಿ ಆಧರಿಸಿ ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read