ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ವಿಜಯಪುರ: ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಯಲ್ಲಪ್ಪ ಶಂಕ್ರಪ್ಪ ಗುಳಗೊಂಡ(38) ಮೃತಪಟ್ಟ ಎಂದು ಹೇಳಲಾಗಿದೆ. ಯಲ್ಲಪ್ಪ ಕಬ್ಬು ಕಟಾವು ಮಾಡಿ ಟ್ರ್ಯಾಕ್ಟರ್ ಗೆ ಲೋಡ್ ಮಾಡಿಸಿದ ನಂತರ ಟ್ರ್ಯಾಕ್ಟರ್ ಹಿಂದೆ ಬಿದ್ದಿದ್ದ ಕಬ್ಬು ಆಯ್ದುಕೊಳ್ಳುತ್ತಿದ್ದರು. ಈ ವೇಳೆ ಚಾಲಕ ಏಕಾಏಕಿ ಟ್ರ್ಯಾಕ್ಟರ್ ಅನ್ನು ಹಿಂದೆ ಚಲಾಯಿಸಿದ್ದರಿಂದ ಟ್ರಾಲಿಯಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read