KKRTC ಬಸ್ ಪಲ್ಟಿ; 8 ಪ್ರಯಾಣಿಕರಿಗೆ ಗಂಭೀರ ಗಾಯ

ಕಲಬುರ್ಗಿ: ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕಲಬುರ್ಗಿ ನಗರದ ಹೊರವಲಯದಲ್ಲಿ ನಡೆದಿದೆ.

ನಂದೂರು ಕೈಗಾರಿಕಾ ಪ್ರದೇಶದ ಬಳಿ ಈ ದುರಂತ ಸಂಭವಿಸಿದ್ದು, ಅಪಘಾತದಲ್ಲಿ 8 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ಡಿಪೋಗೆ ಸೇರಿದ್ದ ಬಸ್ ಕಲಬುರ್ಗಿಯಿಂದ ಯಾದಗಿರಿಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ.

ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ಘಟನಾ ಸ್ಥಳಕ್ಕೆ ಕಲಬುರ್ಗಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read