ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ‘ಜನಾರ್ದನ ರೆಡ್ಡಿ’ ಮಹತ್ವದ ಹೇಳಿಕೆ

ಕೊಪ್ಪಳ : ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಘೋಷಣೆ ಕುರಿತು ಶಾಸಕ ಜನಾರ್ದನ ರೆಡ್ಡಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಲೋಕಸಭಾ ಚುನಾವಣೆಗೆ ಹೊಸ ಅಭ್ಯರ್ಥಿಗಳು ಈಗಾಗಲೇ ರೆಡಿ ಆಗಿದ್ದಾರೆ, ನಾನಾಗಲಿ, ನನ್ನ ಕುಟುಂಬದವರಾಗಲಿ ಸ್ಪರ್ಧೆ ಮಾಡುವುದಿಲ್ಲ ಎಂದರು.

ಲೋಕಸಭಾ ಚುನಾವಣೆಯ ಹಿನ್ನೆಲೆ ಜನವರಿ 11 ರಂದು ಕೊಪ್ಪಳದಲ್ಲಿ 6 ಜಿಲ್ಲೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದ್ದೇನೆ ಎಂದರು.. ಕೆಆರ್ ಪಿಪಿ ಸ್ವತಃ ಬಲದ ಮೇಲೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ, ಬೇರೆ ಪಕ್ಷಗಳ ಜೊತೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದರು.

ಕೆಆರ್ಪಿಪಿ ಸಂಸ್ಥಾಪಕ ಮತ್ತು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹನುಮ ಮಾಲೆ ಧರಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read