ಬೆಂಗಳೂರು : ರಾಜ್ಯದ ಪ್ರೌಢಶಾಲಾ ಮಕ್ಕಳಿಗೆ ಸಿಹಿಸುದ್ದಿ, ಮುಂದಿನ ತಿಂಗಳಿನಿಂದ ಸರ್ಕಾರಿ ಶಾಲೆಯ 10 ನೇ ತರಗತಿ ಮಕ್ಕಳಿಗೆ ಮೊಟ್ಟೆ ಹಾಗೂ ವಾರಕ್ಕೆ ಮೂರು ದಿನ ರಾಗಿಮಲ್ಟ್ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಈ ಕುರಿತು ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಈಗಾಗಲೇ 1 ರಿಂದ 8 ನೇ ತರಗತಿವರೆಗೆ ಮೊಟ್ಟೆಯನ್ನು ವಿತರಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದಲೇ 10 ನೇ ತರಗತಿವರೆಗೆ ಮೊಟ್ಟೆ, ಹಾಗೂ ರಾಗಿ ಮಾಲ್ಟ್ ವಿತರಿಸಲಾಗುವುದು ಎಮದು ಹೇಳಿದ್ದಾರೆ.
ಇನ್ನು ಸರ್ಕಾರಿ ಪ್ರಾಥಮಿಕ ಶಾಲಾ ಗ್ರೇಡ್-2 ರ ದೈಹಿಕ ಶಿಕ್ಷಣ ಶಿಕ್ಷಕರಿಗೆ ಇದುವರೆಗೂ ಯಾವುದೇ ತರಹದ ಬಡ್ತಿ ಸಿಗದಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಇಲಾಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.