
ಚಿತ್ರದುರ್ಗ: ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ಸಮಸ್ಯೆಯ ಕಾರಣ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಾರನಕಟ್ಟೆ ಗ್ರಾಮದಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ.
ಸಚಿವರು ಬೆಂಗಳೂರಿನಿಂದ ಗದಗಕ್ಕೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗ್ಗೆ 10:15ಕ್ಕೆ ಬೆಂಗಳೂರಿನ ಜಕ್ಕೂರು ಏರೋಡ್ರಂನಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದೆ. ಪೈಲಟ್ ಕೂಡಲೇ ಸುರಕ್ಷಿತವಾಗಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಮಾಡಿದ್ದಾರೆ. ನಂತರ ಬೈರತಿ ಸುರೇಶ್ ರಸ್ತೆ ಮಾರ್ಗವಾಗಿ ಗದಗಕ್ಕೆ ಪ್ರಯಾಣ ಬೆಳೆಸಿದ್ದಾರೆ.