ದುಡುಕಿನ ನಿರ್ಧಾರ ಕೈಗೊಂಡ ದಂಪತಿ: ಕೆರೆಗೆ ಹಾರಿ ಆತ್ಮಹತ್ಯೆ

ಹಾಸನ: ಕೆರೆಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದ ಅಡ್ಲಿಮನೆ ರಸ್ತೆಯ ಚಿಕ್ಕಟ್ಟೆ ಕೆರೆಯಲ್ಲಿ ನಡೆದಿದೆ.

ಹಿಲಾಯಿ ನಗರದ ರಿಜ್ವಾನ್(31), ಸಮ್ರಿನ್ ಭಾನು(25) ಮೃತಪಟ್ಟವರು. ಮಂಗಳವಾರ ಬೆಳಗ್ಗೆ ಮನೆಯಿಂದ ಹೊರಗೆ ಬಂದ ಅವರು ಚಿಕ್ಕಟ್ಟೆ ಕೆರೆ ಬಳಿಗೆ ಬಂದಿದ್ದಾರೆ. ಮೊದಲು ಸಮ್ರಿನ್ ಭಾನು ಕೆರೆಗೆ ಹಾರಿದ್ದು, ನಂತರ ಪ್ರತಿ ರಿಜ್ವಾನ್ ಕೂಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಹುಡುಕಾಟ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read