ಬಿಗ್ ಬಾಸ್ ನಲ್ಲಿ ‘ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸಿದ್ದು ಶ್ಲಾಘನೀಯ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ ಬಾಸ್ ನಲ್ಲಿ “ಶುಚಿ – ನನ್ನ ಮೈತ್ರಿ ಮುಟ್ಟಿನ ಕಪ್ʼ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯ ನಡೆದಿರುವುದು ಶ್ಲಾಘನೀಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಸಚಿವರು ಮುಟ್ಟಿನ ಸಂದರ್ಭದಲ್ಲಿ ಹೆಣ್ಣುಮಕ್ಕಳ ಆರೋಗ್ಯದ ಬಗ್ಗೆ ವಹಿಸಿಕೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಕುರಿತು ಅರಿವು ಮೂಡಿಸಲು ಮುಂದಾದ ಕಲರ್ಸ್ ಕನ್ನಡ ಮಾಧ್ಯಮದವರಿಗೆ ನನ್ನ ಧನ್ಯವಾದಗಳು.

ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮೈತ್ರಿ ಯೋಜನೆ ಕುರಿತು ಜಾಗೃತಿ ಮೂಡಿಸಿರುವ ಶುಚಿ ಯೋಜನೆಯ ರಾಯಭಾರಿಯಾಗಿರುವ ಕನ್ನಡದ ಹೆಸರಾಂತ ನಟಿ ಸಪ್ತಮಿ ಗೌಡ ಅವರಿಗೂ ನನ್ನ ಧನ್ಯವಾದಗಳು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read