KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : 2,000 ರೂ.ಬರ ಪರಿಹಾರ ಖಾತೆಗೆ ಜಮಾ

Published January 6, 2024 at 5:50 am
Share
SHARE

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ 2023-24ನೇ ಸಾಳಿನ ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆ ಹಾಗೂ ಬರದಿಂದ ಉಂಟಾದ ಬೆಳೆಹಾನಿಗೆ ಘೋಷಿಸಲಾಗಿದ್ದ 2,000 ರೂ. ವರೆಗಿನ ತಾತ್ಕಾಲಿಕ ಬೆಳೆ ಪರಿಹಾರವನ್ನು ಅರ್ಹ ರೈತರ ಖಾತೆಗೆ ಜಮಾ ಮಾಡಲು 105 ಕೋಟಿ ರೂ. ಬಿಡುಗಡೆ ಮಾಡಿದೆ.

2023ನೇ ಸಾಲಿನ ಜೂನ್ ರಿಂದ ಸೆಪ್ಟೆಂಬರ್ ಮಾಹೆಯವರೆಗಿನ ಮುಂಗಾರಿನಲ್ಲಿ ಶೇ. 25 ರಷ್ಟು ಮಳೆಕೊರತೆ ಕಂಡು ಬಂದಿದೆ. ಕೇಂದ್ರ ಸರ್ಕಾರದ ಬರ ಕೈಪಿಡಿ-2020 ರಲ್ಲಿ ಬರ ಪರಿಸ್ಥಿತಿ ಘೋಷಿಸಲು ಅನುಸರಿಸಬೇಕಾದ ಮಾನದಂಡಗಳಂತೆ, ಹಂತ-1 ರಲ್ಲಿ ಕಡ್ಡಾಯ ಮಾನದಂಡಗಳಾದ ಮಳೆ ಕೊರತೆ (ಶೇ.60ಕ್ಕಿಂತ ಹೆಚ್ಚು) ಅಥವಾ ಸತತ ಮೂರು ವಾರಗಳ ಅಥವಾ ಅದಕ್ಕಿಂತ ಹೆಚ್ಚು ಶುಷ್ಕ ವಾತಾವರಣ (Dry Spell) ಕಂಡು ಬಂದಿರಬೇಕು. ಹಂತ-2 ರಲ್ಲಿ ತತ್ಪರಿಣಾಮ ಮಾನದಂಡಗಳಾದ ಕೃಷಿ ಬಿತ್ತನೆ ฮ, तुळ 3 d d eo (NDVI/ NDWI-Dev (%) and VIC (%)) ತೇವಾಂಶ ಕೊರತೆ (MAI) ಹಾಗೂ ನದಿಗಳಲ್ಲಿನ ಹರಿವು, ಜಲಾಶಯಗಳ ನೀರಿನ ಸಂಗ್ರಹಣೆ ಹಾಗೂ ಅಂತರ್ಜಲ ಮಟ್ಟ ಸೂಚ್ಯಂಕಗಳಲ್ಲಿನ ತೀವ್ರತೆಯನ್ನು ಪರಿಶೀಲಿಸಿ ಬರಕ್ಕೆ ತುತ್ತಾಗಿರುವ ತಾಲ್ಲೂಕುಗಳನ್ನು ಗುರುತಿಸಿ, ಬೆಳೆ ಸಮೀಕ್ಷೆ ದೃಡೀಕರಣ (Ground Truthing) ವರದಿ ಜಿಲ್ಲಾಧಿಕಾರಿಗಳಿಂದ ಪಡೆದು, ಬರ ವರ್ಗೀಕರಣ (ಸಾಧಾರಣ & ತೀವು) ಮಾಡಲಾಗಿದೆ.

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ಬರ ನಿರ್ವಹಣೆ ಕೈಪಿಡಿ 2020 ರನ್ವಯ, ಜೂನ್ 1 ರಿಂದ ಆಗಸ್ಟ್ 19 ರವರೆಗಿನ ಅವಧಿಗೆ ಎಲ್ಲಾ ಮಾನದಂಡಗಳನ್ನು ವಿಶ್ಲೇಷಿಸಿ 195 ತಾಲ್ಲೂಕುಗಳನ್ನು ಬರ ಪರಿಸ್ಥಿತಿ ಕಂಡುಬಂದಿರುವ ತಾಲ್ಲೂಕುಗಳೆಂದು ಗುರುತಿಸಿ ಈ ತಾಲ್ಲೂಕುಗಳಲ್ಲಿ ಬೆಳೆ ಸಮೀಕ್ಷೆ ದೃಢೀಕರಣ (GT) ಕೈಗೊಂಡು 195 ತಾಲ್ಲೂಕುಗಳನ್ನು ಮೇಲೆ ಒದಲಾದ (1)ರ ಸರ್ಕಾರಿ ಆದೇಶ ದಿನಾಂಕ:13-9-2023ರಂದು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.

ಜೂನ್ ರಿಂದ ಸೆಪ್ಟಂಬ‌ರ್ ಅಂತ್ಯದ ಅವಧಿಗೆ ಎಲ್ಲಾ ಮಾನದಂಡಗಳನ್ನು ವಿಶ್ಲೇಷಿಸಿ 21 ತಾಲ್ಲೂಕುಗಳನ್ನು ಬರ ಪರಿಸ್ಥಿತಿ ಕಂಡುಬಂದಿರುವ ತಾಲ್ಲೂಕುಗಳೆಂದು ಗುರುತಿಸಿ ಈ ತಾಲ್ಲೂಕುಗಳಲ್ಲಿ ಬೆಳೆ ಸಮೀಕ್ಷೆ ದೃಢೀಕರಣ (GT) ಕೈಗೊಂಡು 21 ತಾಲ್ಲೂಕುಗಳನ್ನು ಮೇಲೆ ಒದಲಾದ (1)ರ ಆದೇಶ ದಿನಾಂಕ:12-10-2023ರಂದು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ ಮತ್ತು ಜೂನ್ ರಿಂದ ಅಕ್ಟೋಬರ್ ಅಂತ್ಯದ ವರೆಗಿನ ಹವಾಮಾನ ಪರಿಸ್ಥಿತಿ ಅನುಗುಣವಾಗಿ 7 ತಾಲ್ಲೂಕುಗಳನ್ನು ಬರ ಪರಿಸ್ಥಿತಿ ಕಂಡುಬಂದಿರುವ ತಾಲ್ಲೂಕುಗಳೆಂದು ಗುರುತಿಸಿ, ಬೆಳೆ ಸಮೀಕ್ಷೆ ದೃಢೀಕರಣ (GT) ಕೈಗೊಂಡು 7 ತಾಲ್ಲೂಕುಗಳನ್ನು ಮೇಲೆ ಒದಲಾದ (1)ರ ಸರ್ಕಾರಿ ಆದೇಶ ದಿನಾಂಕ:04-11-2023ರಂದು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ.

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯ ಬರ ನಿರ್ವಹಣೆ ಕೈಪಿಡಿ 2020ರನ್ವಯ ವಿವಿಧ ಅವಧಿಯ ಹವಾಮಾನ ಪರಿಸ್ಥಿತಿ ಅನುಗುಣವಾಗಿ ಒಟ್ಟಾರೆ ರಾಜ್ಯದ 236 ತಾಲ್ಲೂಕುಗಳ ಪೈಕಿ 223 ತಾಲ್ಲೂಕುಗಳನ್ನು (196 ತೀವ್ರ ಬರ & 27 ಸಾಧರಣ ಬರ) ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ (ಅನುಬಂದ-1).

ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವ ತಾಲ್ಲೂಕುಗಳಲ್ಲಿ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಇಲಾಖೆಯ ಅಧಿಕಾರಿ / ಸಿಬ್ಬಂದಿಯ ಜಂಟಿ ತಂಡಗಳು ಬೆಳೆ ಸಮೀಕ್ಷೆ ನಡೆಸಿ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಶೇ.33ರಷ್ಟಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ವರದಿಯನ್ನು ತಯಾರಿಸಿದ್ದಾರೆ. ಅದರಂತೆ 46.11 ಲಕ್ಷ ಹೆಕ್ಟೇರ್ ಕೃಷಿ ಹಾಗೂ 2.06 ಲಕ್ಷ ಹೆಕ್ಟೇರ್ ತೋಟಗಾರಿಕೆ ಸೇರಿದಂತೆ ಒಟ್ಟು 48.17 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಇದರ ಪೈಕಿ 40.72 ಲಕ್ಷ ಹೇರ್ ಮಳೆಯಾಶ್ರಿತ 7.39 ಲಕ್ಷ ಹೇಕ್ಟೇರ್, ನೀರಾವರಿ, ಹಾಗೂ 0.07 ಲಕ್ಷ ಹೇರ್ ಬಹುವಾರ್ಷಿಕ ಬೆಳೆಹಾನಿಯಾಗಿದೆ (ಬೆಳವಾರು, ತಾಲ್ಲೂಕುವಾರು ಹಾಗೂ ಮಳೆಯಾಶ್ರಿತ/ನೀರಾವರಿ/ಬಹುವಾರ್ಷಿಕ ವಿವರಗಳು (ಅನುಬಂದ-2) ತಾಲ್ಲೂಕುವಾರು ಬೆಳೆಹಾನಿಗೆ ಇನ್‌ಪುಟ್ ಸಬ್ಸಿಡಿಗೆ NDRF ಅಡಿಯಲ್ಲಿ ರೂ.4663.12 ಕೋಟಿಗಳ ಆರ್ಥಿಕ ನೆರವನ್ನು ನೀಡುವಂತೆ ಕೋರಿ ರಾಜ್ಯ ಸರ್ಕಾರದಿಂದ ಮೇಲೆ ಓದಲಾದ (2)ರ ದಿನಾಂಕ:15-11-2023ರ ಪತ್ರದಲ್ಲಿ ಒಟ್ಟಾರೆಯಾಗಿ ಕೇಂದ್ರೀಯ ಕೃಷಿ ಮಂತ್ರಾಲಯಕ್ಕೆ ಅಂತಿಮ ಮೆಮೋರಾಂಡಮ್ ಸಲ್ಲಿಸಲಾಗಿದೆ.

ಕೇಂದ್ರ ಸರ್ಕಾರದ SDRF/NDRF ಮಾರ್ಗಸೂಚಿಯನುಸಾರ ಬರ ಪರಿಸ್ಥಿತಿಯಿಂದ ಶೇ.33% ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಉಂಟಾದ ಬೆಳೆ ಹಾನಿಗೆ ಗರಿಷ್ಟ 02 ಹೆಕ್ಟೇರ್‌ಗೆ ಸೀಮಿತಗೊಳಿಸಿ ಈ ಕೆಳಕಂಡ ದರದಲ್ಲಿ ಇನ್‌ಪುಟ್ ಸಬ್ಸಿಡಿ ನಿಗಧಿಪಡಿಸಲಾಗಿದೆ.

You Might Also Like

ಗ್ಯಾಸ್ಟ್ರಿಕ್ ಸಮಸ್ಯೆಗೆ ಅತ್ಯುತ್ತಮ ಮದ್ದು ಈ ಪಾನೀಯ

ದಿಕ್ಕು ತಪ್ಪಿದ ಚಾಲಕಿ: ಉಬರ್‌ನಲ್ಲಿ ಗನ್‌ ತೋರಿಸಿ ಪ್ರಯಾಣಿಕರನ್ನು ಬೆದರಿಸಿದ ಘಟನೆ ವೈರಲ್ | Watch

BREAKING NEWS: ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು!

ಶಿಕ್ಷಕರಿಗೆ ಕಿರುಕುಳ, ಹಣ ವಸೂಲಿ: ಬಿಇಒ ಅಮಾನತು

BREAKING NEWS: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಬೆಂಕಿ ಅವಘಡ: 8 ಜನರು ಸಾವು

TAGGED:Good news for farmers from state government: Rs 2000 deposited in drought relief account
Share This Article
Facebook Copy Link Print

Latest News

ಗ್ಯಾಸ್ಟ್ರಿಕ್ ಸಮಸ್ಯೆಗೆ ಅತ್ಯುತ್ತಮ ಮದ್ದು ಈ ಪಾನೀಯ
ದಿಕ್ಕು ತಪ್ಪಿದ ಚಾಲಕಿ: ಉಬರ್‌ನಲ್ಲಿ ಗನ್‌ ತೋರಿಸಿ ಪ್ರಯಾಣಿಕರನ್ನು ಬೆದರಿಸಿದ ಘಟನೆ ವೈರಲ್ | Watch
BREAKING NEWS: ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು!
ಶಿಕ್ಷಕರಿಗೆ ಕಿರುಕುಳ, ಹಣ ವಸೂಲಿ: ಬಿಇಒ ಅಮಾನತು

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಭರ್ಜರಿ ಸುದ್ದಿ: ಮುಂದಿನ ತಿಂಗಳಿಂದ ‘ಅನ್ನಭಾಗ್ಯ ಯೋಜನೆ’ಯಡಿ ಉಚಿತವಾಗಿ ಅಕ್ಕಿ ಜತೆಗೆ ರಾಗಿ, ಜೋಳ ವಿತರಣೆ
ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್: ಮೂರು ತಿಂಗಳ ಪಡಿತರ ಮುಂಗಡ ವಿತರಣೆಗೆ ಆದೇಶ
BREAKING : ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ:  ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘BCCI’ ಆದೇಶ
SHOCKING : ರಾಜ್ಯದಲ್ಲಿ ಆಘಾತಕಾರಿ ಘಟನೆ : ಯುವತಿಗೆ ಲೈಂಗಿಕ ಕಿರುಕುಳ ನೀಡಿದ ‘KSRTC’ ಬಸ್ ಕಂಡಕ್ಟರ್.!

Automotive

ಪಿ.ಯು.ಸಿ. ಬೇಕೆ ? ವಾಹನದ ಗಾಜಿಗೆ ಈ ಸ್ಟಿಕ್ಕರ್ ಕಡ್ಡಾಯ !
ನಿಯಂತ್ರಣ ತಪ್ಪಿದ ಕಾರಿನಿಂದ ಭೀಕರ ಅಪಘಾತ ; ಗಾಳಿಯಲ್ಲಿ ಹಾರಿದ ಬೈಕ್‌ ಸವಾರರ ಭಯಾನಕ ದೃಶ್ಯ ಕ್ಯಾಮರಾದಲ್ಲಿ ಸೆರೆ | Video
ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಬಿಗ್‌ ಶಾಕ್‌ ; ಏಪ್ರಿಲ್ 1 ರಿಂದ ದರ ಏರಿಕೆ‌ !

Entertainment

ಬಾಲಿವುಡ್‌ನ ಅತಿ ಸಿರಿವಂತ ಈ ನಿರ್ಮಾಪಕ ; ಸ್ಟಾರ್ಟಪ್‌ ಗಳಲ್ಲೂ ಹೂಡಿಕೆ !
ಮಾನಸಿಕ ಆರೋಗ್ಯದ ಬಗ್ಗೆ ಮಾತಾಡಿದ ಆಲಿಯಾ: ಥೆರಪಿಗೆ ಹೋಗ್ತೀನಿ ಅಂದ್ರು ನಟಿ !
BIG NEWS: ಟ್ರಂಪ್ ಕುರಿತ ಪೋಸ್ಟ್ ಡಿಲೀಟ್ ; ಕಂಗನಾಗೆ ಬಿಜೆಪಿ ಮುಖ್ಯಸ್ಥ ನಡ್ಡಾ ಸೂಚನೆ !

Sports

ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ: ಹಾಲಿ ಚಾಂಪಿಯನ್ ಕೆಕೆಆರ್ ಔಟ್, RCB ಪ್ಲೇಆಫ್ ಪ್ರವೇಶ ಬಹುತೇಕ ಖಚಿತ
ವಾಂಖೆಡೆಯಲ್ಲಿ ಸಂಭ್ರಮದ ನಡುವೆ ಅಣ್ಣನ ಸಿಟ್ಟು ; ಕಾರ್ ಡೆಂಟ್‌ಗಾಗಿ ತಮ್ಮನಿಗೆ ಕ್ಲಾಸ್ ತೆಗೆದುಕೊಂಡ ರೋಹಿತ್ ಶರ್ಮಾ | Watch Video
ಬೆಂಗಳೂರಿನಲ್ಲಿ ಇಂದು ಹೈವೋಲ್ಟೇಜ್ ಪಂದ್ಯ: ಪ್ಲೇಆಫ್ ಗೆ ಅಧಿಕೃತ ಎಂಟ್ರಿಗೆ RCB ಸಜ್ಜು

Special

ಸ್ವಿಮ್ಮಿಂಗ್: ದೇಹ ಮತ್ತು ಮನಸ್ಸಿನ ಆರೋಗ್ಯಕ್ಕೆ ವರದಾನ
ಕಲ್ಲಂಗಡಿ ತಿನ್ನುವುದರಿಂದ ಸಿಗುತ್ತೆ ಇಷ್ಟೆಲ್ಲಾ ಆರೋಗ್ಯ ಲಾಭ
ಪ್ರತಿದಿನ ರಾತ್ರಿ ಪಾದಗಳಿಗೆ ಜೇನುತುಪ್ಪದಿಂದ ಮಸಾಜ್‌ ಮಾಡಿದ್ರೆ ಸಿಗುತ್ತೆ ಅದ್ಭುತ ಪ್ರಯೋಜನ…!  

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?