alex Certify ‘ನೀನು ಮುನ್ನುಗ್ಗು, ನಿನ್ನ ಬೆನ್ನ ಹಿಂದೆ ನಾನಿದ್ದೇನೆ’ : ನಟ ರಿಷಬ್ ಶೆಟ್ಟಿಗೆ ಮೈಸಂದಾಯ ದೈವದ ಅಭಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನೀನು ಮುನ್ನುಗ್ಗು, ನಿನ್ನ ಬೆನ್ನ ಹಿಂದೆ ನಾನಿದ್ದೇನೆ’ : ನಟ ರಿಷಬ್ ಶೆಟ್ಟಿಗೆ ಮೈಸಂದಾಯ ದೈವದ ಅಭಯ

ಮಂಗಳೂರು : ಸ್ಯಾಂಡಲ್ ವುಡ್ ಕಂಡಂತಹ ಪ್ರತಿಭಾನ್ವಿತ ನಿರ್ದೇಶಕ, ನಟ ರಿಷಬ್ ಶೆಟ್ಟಿ ನಿರ್ದೇಶನದ ಬಹು ನಿರೀಕ್ಷಿತ ಕಾಂತಾರ ಚಾಪ್ಟರ್-1 ಫಸ್ಟ್ ಲುಕ್ ಟೀಸರ್ ಈಗಾಗಲೇ ಗಮನ ಸೆಳೆಯತ್ತಿದೆ. ಈ ಸಿನಿಮಾ ಭಾರಿ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಮೂಡಿಸಿದ್ದು, ಸಿನಿಮಾದ ಕೆಲಸಗಳು ಈಗಾಗಲೇ ಆರಂಭ ಆಗಿದೆ.

ನೀನು ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ

ಇದರ ನಡುವೆ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮಂಗಳೂರಿನ ವಜ್ರದೇಹಿ ಮಠಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ ಮೈಸಂದಾಯ ದೈವದ ದರ್ಶನ ಪಡೆದ ನಟನಿಗೆ ದೈವ ಆಶೀರ್ವಾದ ಮಾಡಿದೆ. ‘ನೀನು ಮುನ್ನುಗ್ಗು ನಿನ್ನ ಬೆನ್ನ ಹಿಂದೆ ನಾನಿದ್ದೇನೆ’, ಯಾವುದಕ್ಕೂ ಜಗ್ಗಬೇಡ, ಎದೆಗುಂದಬೇಡ ’ ಎಂದು ಹೇಳುವ ಮೂಲಕ ದೈವ ‘ಕಾಂತಾರ’ ರೀತಿಯಲ್ಲೇ ನಟ ರಿಷಬ್ ಶೆಟ್ಟಿಗೆ ಆಶೀರ್ವಾದ ಮಾಡಿದೆ.

ನಟ ರಿಷಬ್ ಶೆಟ್ಟಿ ದೈವವನ್ನು ಕಮರ್ಷಿಯಲ್ ಆಗಿ ಬಳಸಿಕೊಳ್ಳುತ್ತಿದ್ದಾರೆ, ದೈವದ ಹೆಸರಿನಲ್ಲಿ ಸಿನಿಮಾ ಮಾಡಿ ಜನರನ್ನು ಸೆಳೆಯುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬಂದಿದ್ದವು. ಈ ಬೆನ್ನಲ್ಲೇ ಶೆಟ್ಟರು ದೈವದ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

ಕಳೆದ ವರ್ಷ ಸೆಪ್ಟಂಬರ್ 30ರಂದು ಬಿಡುಗಡೆಯಾಗಿದ್ದ ‘ಕಾಂತರಾ’ ಸಿನಿಮಾ ಇಡೀ ವಿಶ್ವವನ್ನೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಸ್ಯಾಂಡಲ್ವುಡ್ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದ ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಹಾಗೂ ಸಪ್ತಮಿ ಗೌಡ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು. ಅಚ್ಯುತ್ ಕುಮಾರ್, ಕಿಶೋರ್, ಪ್ರಮೋದ್ ಶೆಟ್ಟಿ, ಮಾನಸಿ ಸುಧೀರ್, ಪ್ರದೀಪ್ ಶೆಟ್ಟಿ, ಚಂದ್ರಕಲಾ ರಾವ್, ನವೀನ್, ಸ್ವರಾಜ್ ಶೆಟ್ಟಿ, ಸತೀಶ್ ಆಚಾರ್ಯ, ರಕ್ಷಿತ್ ರಾಮಚಂದ್ರ ಶೆಟ್ಟಿ, ದೀಪಕ್ ರಾಯ್ ಸೇರಿದಂತೆ ಹಲವರು ಪಾತ್ರ ನಿರ್ವಹಿಸಿದ್ದರು. ಇದೀಗ ಕಾಂತಾರ ಚಾಪ್ಟರ್-1 ಪ್ರಾರಂಭವಾಗಿದ್ದು, ಸಿನಿಮಂದಿಯಲ್ಲಿ ಸಿಕ್ಕಾಪಟ್ಟೆ ಕ್ಯುರಿಯಾಸಿಟಿ ಹುಟ್ಟಿಸಿದೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...