ಪ್ರೊಫೆಸರ್ ನಿಂದ ಲೈಂಗಿಕ ದೌರ್ಜನ್ಯ: ಪ್ರಧಾನಿ ಮೋದಿ, ಹರಿಯಾಣ ಸಿಎಂಗೆ ಪತ್ರ ಬರೆದ 500 ವಿದ್ಯಾರ್ಥಿನಿಯರು!

ನವದೆಹಲಿ: ಹರಿಯಾಣದ ಸಿರ್ಸಾದ ಸುಮಾರು 500 ಮಹಿಳಾ ಕಾಲೇಜು ವಿದ್ಯಾರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಕಚೇರಿ ಮತ್ತು ಮುಖ್ಯಮಂತ್ರಿ ಎಂಎಲ್ ಖಟ್ಟರ್ ಅವರಿಗೆ ಪತ್ರ ಬರೆದು ಪ್ರಾಧ್ಯಾಪಕರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ.

ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಪ್ರೊಫೆಸರ್ ವಿರುದ್ಧ ದೂರು ನೀಡಿರುವ ವಿದ್ಯಾರ್ಥಿಗಳು, ಅವರನ್ನು ಅಮಾನತುಗೊಳಿಸಬೇಕು ಮತ್ತು ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಗುರುವಾರ ಬರೆದ ಪತ್ರವು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲು ಪ್ರಾರಂಭಿಸಿದ ನಂತರ ಆರೋಪಗಳ ಬಗ್ಗೆ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಯಿತು. ಪ್ರಾಧ್ಯಾಪಕರು ತಮ್ಮನ್ನು ತಮ್ಮ ಕೊಠಡಿಗೆ ಕರೆದ ನಂತರ ದಿನಗಳವರೆಗೆ ಲೈಂಗಿಕವಾಗಿ ಶೋಷಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ವರದಿಯ ಪ್ರಕಾರ, ವಿಶ್ವವಿದ್ಯಾಲಯದ ಆಂತರಿಕ ದೂರು ಸಮಿತಿಯಿಂದ ಎರಡು ಬಾರಿ ಕ್ಲೀನ್ ಚಿಟ್ ಪಡೆದಿರುವ ಪ್ರೊಫೆಸರ್ ವಿರುದ್ಧ ವಿದ್ಯಾರ್ಥಿಗಳು ಬರೆದ ನಾಲ್ಕನೇ ಪತ್ರ ಇದಾಗಿದೆ. ಪ್ರಾಥಮಿಕ ತನಿಖೆಯ ನಂತರ ಎಫ್ಐಆರ್ ದಾಖಲಿಸುವುದಾಗಿ ಎಎಸ್ಪಿ ದೀಪ್ತಿ ಗರ್ಗ್ ಹೇಳಿದ್ದಾರೆ.

ಪತ್ರದಲ್ಲಿ ಮಾಡಲಾಗಿರುವ ಆರೋಪಗಳ ಬಗ್ಗೆ ಮೊದಲು ತನಿಖೆ ನಡೆಸೋಣ. ನಮ್ಮ ತನಿಖೆಗಳ ಆಧಾರದ ಮೇಲೆ ನಾವು ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಅವರು ಹೇಳಿದರು. ಆರೋಪಿ ಪ್ರೊಫೆಸರ್ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು “ರಾಜಕೀಯ ಪ್ರೇರಿತ” ಎಂದು ಕರೆದಿದ್ದಾರೆ. ನಾನು ವಿಶ್ವವಿದ್ಯಾಲಯದಲ್ಲಿ ಕೆಲವು ಕೆಲಸಗಳಲ್ಲಿ ಸಕ್ರಿಯನಾಗಿರುವುದರಿಂದ ನನ್ನನ್ನು ಗುರಿಯಾಗಿಸಲಾಗುತ್ತಿದೆ. ನನ್ನ ವಿರುದ್ಧ ಯಾವುದೇ ತನಿಖೆ ಎದುರಿಸಲು ನಾನು ಸಿದ್ಧ. ಇದು ರಾಜಕೀಯ ದುರುದ್ದೇಶವಲ್ಲದೆ ಬೇರೇನೂ ಅಲ್ಲ” ಎಂದು ಅವರು ತಿಳಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read