ಬೆಳಗಾವಿ : ಹಲ್ಲಿ ಬಿದ್ದಿದ್ದ ಕ್ಷೀರಭಾಗ್ಯದ ಹಾಲು ಸೇವಿಸಿ 23 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಖಾನಾಪುರ ಗ್ರಾಮದಲ್ಲಿ ನಡೆದಿದೆ.
ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಸರ್ಕಾರಿ ಶಾಲೆಯೊಂದರಲ್ಲಿ ಈ ಘಟನೆ ನಡೆದಿದೆ. ಮಕ್ಕಳಿಗೆ ಕ್ಷೀರ ಭಾಗ್ಯದ ಹಾಲು ನೀಡಲಾಗಿತ್ತು, ನಂತರ ಹಾಲಿಗೆ ಹಲ್ಲಿ ಬಿದ್ದಿರುವ ವಿಚಾರ ಗೊತ್ತಾಗಿದೆ.
ಅಸ್ವಸ್ಥಗೊಂಡ ಮಕ್ಕಳನ್ನು ಆಂಬುಲೆನ್ಸ್ ಮೂಲಕ ಸಂಕೇಶ್ವರದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ, ಆಸ್ಪತ್ರೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.