BREAKING : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ‘ರೌಡಿಶೀಟರ್’ ಎಸ್ಕೇಪ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಿಂದ ಕುಖ್ಯಾತ ರೌಡಿಶೀಟರ್ ಓರ್ವ ಎಸ್ಕೇಪ್ ಆದ ಘಟನೆ ಇಂದು ಮುಂಜಾನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮಾಗಲು ತಾಲೂಕಿನ ರೌಡಿಶೀಟರ್ ಪೂರ್ಣೇಶ್ ಎಂಬಾತ ಚಿಕ್ಕಮಗಳೂರಿನ ಮಲ್ಲೇಗೌಡ ಆಸ್ಪತ್ರೆಯಿಂದ ಇಂದು ಮುಂಜಾನೆ ಎಸ್ಕೇಪ್ ಆಗಿದ್ದಾನೆ.

ಕೊಲೆ ಯತ್ನ ಪ್ರಕರಣದಲ್ಲಿ ಈ ಹಿಂದೆ ಪೂರ್ಣೇಶ್ ನನ್ನು ಬಂಧಿಸಲಾಗಿತ್ತು, ಬಂಧಿಸಲು ಹೋದಾಗ ಈತ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದನು, ನಂತರ ಪೊಲೀಸರು ಈತನ ಕಾಲಿಗೆ ಗುಂಡು ಹಾರಿಸಿ ಬಂದಿಸಿದ್ದರು.1 ತಿಂಗಳಿನಿಂದ ಜಿಲ್ಲಾಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ರೌಡಿಶೀಟರ್ ಪೂರ್ಣೇಶ್ ಇಂದು ಮುಂಜಾನೆ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read